Gadag: ದಕ್ಷಿಣದಲ್ಲಿರುವ ಮಳೆ ಉತ್ತರದಲ್ಲಿಲ್ಲ, ಬಿತ್ತನೆ ಮಾಡಿ ಮಳೆಯಿಲ್ಲದೆ ಕಂಗಾಲಾದ ಗದಗ ರೈತರು

Edited By: ಆಯೇಷಾ ಬಾನು

Updated on: Jul 04, 2023 | 9:22 AM

ಗದಗ ಜಿಲ್ಲೆಯ ರೋಣ, ಗಜೇಂದ್ರಗಡ, ಮುಂಡರಗಿ, ಶಿರಹಟ್ಟಿ, ಲಕ್ಷ್ಮೇಶ್ವರ, ಗಜೇಂದ್ರಗಡ ತಾಲೂಕಿನಲ್ಲಿ ಹೆಸರು ಬಿತ್ತನೆ ಮಾಡಲಾಗಿದ್ದು ಮಳೆ ಕೊರತೆಯಿಂದ ಬೆಳೆ ನಾಶವಾಗಿದೆ. ಕಳೆದ ಬಾರಿ ಅತಿಯಾದ ಮಳೆಯಿಂದ ಹೆಸರು ಬೆಳೆ ಹಾಳಾಗಿತ್ತು. ಈ ಬಾರಿ‌ ಮಳೆ‌ ಇಲ್ಲದೇ ಹೆಸರು ನಾಟಿಯಾಗದೇ ಹಾಳಾಗುತ್ತಿದೆ.

ಗದಗ: ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿದ್ದು ಉತ್ತರ ಕರ್ನಾಟದಲ್ಲಿ ಬರದ ಛಾಯೆ ಆವರಿಸಿದೆ(Karnataka Rain). ಗದಗದಲ್ಲಿ(Gadag) ಮಳೆಯಾಗದ ಕಾರಣ ಮಳೆ ನಂಬಿ ಹೆಸರು ಕಾಳು ಬಿತ್ತನೆ ಮಾಡಿದ ರೈತರು ಕಂಗಾಲಾಗಿದ್ದಾರೆ. ರಾಜ್ಯದಲ್ಲೇ ಅತೀ ಹೆಚ್ಚು ಹೆಸರು ಬೆಳೆಯುವ ಗದಗ ಜಿಲ್ಲೆಯಲ್ಲಿ ಈ ಬಾರಿ 50 ಸಾವಿರ ಹೇಕ್ಟರ್ ಹೆಸರು ಬಿತ್ತನೆ ಸರ್ವನಾಶವಾಗಿದೆ. ಬಿತ್ತನೆ ಮಾಡಿ ತಿಂಗಳಾಗುತ್ತಿದ್ರೂ ಮಳೆ ಇಲ್ಲ. ಹೀಗಾಗಿ ರೈತರು ಕಣ್ಣೀರಿಡುತ್ತ ಮಳೆರಾಯನಿಗಾಗಿ ಕಾದು ಕುಳಿತಿದ್ದಾರೆ. ಮಳೆ ನಂಬಿ ಮುಂಗಾರು ಬೆಳೆಯಾದ ಹೆಸರು ಬಿತ್ತನೆ ಮಾಡಿದ ರೈತರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಗದಗ ಜಿಲ್ಲೆಯ ರೋಣ, ಗಜೇಂದ್ರಗಡ, ಮುಂಡರಗಿ, ಶಿರಹಟ್ಟಿ, ಲಕ್ಷ್ಮೇಶ್ವರ, ಗಜೇಂದ್ರಗಡ ತಾಲೂಕಿನಲ್ಲಿ ಹೆಸರು ಬಿತ್ತನೆ ಮಾಡಲಾಗಿದ್ದು ಮಳೆ ಕೊರತೆಯಿಂದ ಬೆಳೆ ನಾಶವಾಗಿದೆ. ಕಳೆದ ಬಾರಿ ಅತಿಯಾದ ಮಳೆಯಿಂದ ಹೆಸರು ಬೆಳೆ ಹಾಳಾಗಿತ್ತು. ಈ ಬಾರಿ‌ ಮಳೆ‌ ಇಲ್ಲದೇ ಹೆಸರು ನಾಟಿಯಾಗದೇ ಹಾಳಾಗುತ್ತಿದೆ. ಮಳೆ ಬಂದ್ರೂ ಕಷ್ಟ, ಮಳೆ ಬರದಿದ್ರೂ ಕಷ್ಟ ಅಂತ ರೈತರ ಅಳಲು ತೋಡಿಕೊಂಡಿದ್ದಾರೆ. ಮಳೆಯಾಗದೆ ಬಿತ್ತನೆ ಮಾಡಿದ ಜಮೀನು ಬಿರುಕು ಬಿಟ್ಟಿದೆ. ಒಂದು ಎಕರೆ ಪ್ರದೇಶಕ್ಕೆ 20-25 ಸಾವಿರ ರೂಪಾಯಿ ಖರ್ಚು ಮಾಡಿ ಬಿತ್ತನೆ ಮಾಡಿದ ರೈತರು ಸಾಲದ ಸುಳಿಯಲ್ಲಿ ಸಿಲುಕಿಕೊಂಡಿದ್ದಾರೆ.

Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More