ಗದಗ – ರಾಮ ಯಾಗದಲ್ಲಿ ಕೋತಿ ಪ್ರತ್ಯಕ್ಷ! ಯಾಗ ವಿಧಿಗಳ ವೀಕ್ಷಿಸುತ್ತ ಕುಳಿತ ವಾನರ ರೂಪಿ ಹನುಮ!

Edited By: ಸಾಧು ಶ್ರೀನಾಥ್​

Updated on: Jan 22, 2024 | 12:02 PM

ಗದಗ ಜಿಲ್ಲೆ ಲಕ್ಷ್ಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ನಡೆದ ಹೋಮ ಯಾಗದಲ್ಲಿ ವಾನರ ರೂಪಿ ಹನುಮ ಭಾಗಿಯಾಗಿದ್ದಾನೆ. ರಾಮ ಪ್ರಾಣ ಪ್ರತಿಷ್ಠಾಪನೆ ದಿನದ ಅಂಗವಾಗಿ ಯಾಗ ಆಯೋಜಿಸಲಾಗಿತ್ತು. ಆ ವೇಳೆ ಪ್ರತ್ಯಕ್ಷನಾದ ಮಂಗ ಯಾಗ ವಿಧಿಗಳನ್ನ ವೀಕ್ಷಿಸುತ್ತ ಕುಳಿತಿತ್ತು. ಗದಗ ಯೋಗ ತಂಡದಿಂದ ದೇವಸ್ಥಾನದಲ್ಲಿ ಅಗ್ನಿಹೋತ್ರ ಹೋಮ ಆಯೋಜನೆಗೊಂಡಿತ್ತು.

ಗದಗ ಜಿಲ್ಲೆ ಲಕ್ಷ್ಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ನಡೆದ ಹೋಮ ಯಾಗದಲ್ಲಿ ವಾನರ ರೂಪಿ ಹನುಮ ಭಾಗಿಯಾಗಿದ್ದಾನೆ. ರಾಮ ಪ್ರಾಣ ಪ್ರತಿಷ್ಠಾಪನೆ ದಿನದ ಅಂಗವಾಗಿ ಯಾಗ ಆಯೋಜಿಸಲಾಗಿತ್ತು. ಆ ವೇಳೆ ಪ್ರತ್ಯಕ್ಷನಾದ ಮಂಗ ಯಾಗ ವಿಧಿಗಳನ್ನ ವೀಕ್ಷಿಸುತ್ತ ಕುಳಿತಿತ್ತು. ಗದಗ ಯೋಗ ತಂಡದಿಂದ ದೇವಸ್ಥಾನದಲ್ಲಿ ಅಗ್ನಿಹೋತ್ರ ಹೋಮ ಆಯೋಜನೆಗೊಂಡಿತ್ತು. ಹೋಮ ಆರಂಭವಾಗುತ್ತಿದ್ದಂತೆ ಕೋತಿ ಎಂಟ್ರಿ ಕೊಟ್ಟಿತ್ತು. ಸುತ್ತಲು ಜನ ಕೂತಿದ್ದರೂ ಯಾಗ ಸ್ಥಳಕ್ಕೆ ಕೋತಿ ಸಾಗ ಬಂದಿತು. ದೀಪ, ಹೋಮ ಸಾಮಗ್ರಿಗಳನ್ನ ಮುಟ್ಟಿ ಚೆಕ್ ಮಾಡಿದಂತೆ ಕೋತಿ ವರ್ತಿಸುತ್ತಿತ್ತು. ಕೋತಿ ವರ್ತನೆಯಿಂದ ಯಾಗದಲ್ಲಿ ಭಾಗಿಯಾಗಿದ್ದ ರಾಮ ಭಕ್ತರು ಆಶ್ಚರ್ಯಗೊಂಡಿದ್ದು, ಆಂಜನೇಯ ಸ್ವಾಮಿಯೇ ಸ್ಥಳಕ್ಕೆ ಬಂದು ಎಲ್ಲರನ್ನೂ ಆಶೀರ್ವದಿಸಿದ್ದಾನೆ ಎಂದು ಭಾವಿಸಿದರು.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More