ಅಪ್ಪನಿಗೆ ಜೀವಾವಧಿ ಶಿಕ್ಷೆ ಆಗಬೇಕು, ಇಲ್ಲಂದ್ರೆ ನಾನೇ ಕೊಲೆ ಮಾಡ್ತೀನಿ ಎಂದ ತಾಯಿಗೆ ತಕ್ಕಮಗ
ಗದಗ ತಾಲೂಕಿನ ಬಿಂಕದಕಟ್ಟಿಯಲ್ಲಿ ಕೆಎಸ್ಆರ್ಟಿಸಿ ಕಂಡಕ್ಟರ್ ರಮೇಶ್ ನರಗುಂದ ತನ್ನ ಪತ್ನಿ ಯಲ್ಲಮ್ಮ ಅಲಿಯಾಸ್ ಸ್ವಾತಿಯನ್ನು ಹತ್ಯೆ ಮಾಡಿದ್ದಾನೆ. ತಂದೆಗೆ ಮೂರು ವರ್ಷಗಳಿಂದ ಮಾನಸಿಕ ಸಮಸ್ಯೆ, ಭ್ರಮೆ ಇತ್ತು ಎಂದು ಮಗ ಬುದ್ಧಪ್ಪ ಹೇಳಿದ್ದಾನೆ. ತಾಯಿ ಪತಿವ್ರತೆ, ತಂದೆಗೆ ಜೀವಾವಧಿ ಶಿಕ್ಷೆ ಆಗಬೇಕು ಎಂದಿದ್ದಾನೆ.
ಗದಗ, ಅಕ್ಟೋಬರ್ 08: ಚಾಕುವಿನಿಂದ ಇರಿದು ಪತ್ನಿಯನ್ನು ಪತಿ ಹತ್ಯೆಗೈದಿರುವಂತಹ ಘಟನೆ ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ನಡೆದಿದೆ. ಘಟನೆ ಬಗ್ಗೆ ಮಗ ಮಾತನಾಡಿದ್ದು, ತಂದೆಗೆ ಜೀವಾವಧಿ ಶಿಕ್ಷೆ ಆಗಬೇಕು. ಇಲ್ಲಾಂದರೆ ತಾನೇ ಕೊಲೆ ಮಾಡುವುದಾಗಿ ಹೇಳಿದ್ದಾನೆ. ನನ್ನ ತಾಯಿ ಪತಿವ್ರತೆ. ತಂದೆಗೆ ಕಠಿಣ ಶಿಕ್ಷೆ ಆಗಬೇಕು ಎಂದು ಹೇಳಿದ್ದಾನೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
