ಅಯೋಧ್ಯೆ ಶ್ರೀರಾಮನ ದರ್ಶನಕ್ಕೆ ತಂಡೋಪ ತಂಡವಾಗಿ ತೆರಳಿದ ಗದಗ ಜನ

Edited By: ಕಿರಣ್ ಹನುಮಂತ್​ ಮಾದಾರ್

Updated on: Feb 17, 2024 | 6:59 PM

ಗದಗ(Gadag) ಹಾಗೂ ಅಕ್ಕಪಕ್ಕದ ಜಿಲ್ಲೆಗಳ ಕಾರ್ಯಕರ್ತರೆಲ್ಲರೂ ಸೇರಿಕೊಂಡು 200 ಕ್ಕೂ‌ಹೆಚ್ಚು ಭಕ್ತರು ಆಸ್ಥಾ ವಿಶೇಷ ರೈಲಿನಲ್ಲಿ ಪ್ರಯಾಣ  ಬೆಳಸಿದ್ದಾರೆ. ಅಯ್ಯೋಧ್ಯೆ ಶ್ರೀರಾಮನ ದರ್ಶನಕ್ಕೆ ತೆರಳಿದ್ದಾರೆ. ಬೆಳಗಾವಿಯಿಂದ ಗದಗ ಮಾರ್ಗವಾಗಿ ನೇರವಾಗಿ ಅಯೋಧ್ಯೆಗೆ ವಿಶೇಷ ರೈಲು ಮೂಲಕ ತಲುಪಲಿದ್ದಾರೆ.

ಗದಗ, ಫೆ.17: ಅಯ್ಯೋಧ್ಯೆ(Ayodhya)ಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆ ಆಗಿ ಹಲವು ದಿನಗಳು ಕಳೆದಿವೆ. ಈ ಹಿನ್ನಲೆ ಭಕ್ತರು ಗದಗದಿಂದ ಅಯೋಧ್ಯೆಗೆ ತಂಡೋಪ ತಂಡವಾಗಿ ರೈಲಿನಲ್ಲಿ ಪ್ರಯಾಣ ಬೆಳೆಸಿದ್ದಾರೆ. ವಿಶ್ವ ಹಿಂದೂ ಪರಿಷತ್ ಸಂಘಟನೆ ವತಿಯಿಂದ ಅಯೋಧ್ಯೆ ಯಾತ್ರೆ ಆಯೋಜನೆ ಮಾಡಲಾಗಿದ್ದು, ಗದಗ(Gadag) ಹಾಗೂ ಅಕ್ಕಪಕ್ಕದ ಜಿಲ್ಲೆಗಳ ಕಾರ್ಯಕರ್ತರೆಲ್ಲರೂ ಸೇರಿಕೊಂಡು 200 ಕ್ಕೂ‌ಹೆಚ್ಚು ಭಕ್ತರು ಆಸ್ಥಾ ವಿಶೇಷ ರೈಲಿನಲ್ಲಿ ಪ್ರಯಾಣ  ಬೆಳಸಿದ್ದಾರೆ. ಉತ್ತರ ಪ್ರಾಂತದಿಂದ ಒಟ್ಟು 1350 ಸೀಟುಗಳು ಬುಕ್ಕಿಂಗ್ ಆಗಿದ್ದು, ಬೆಳಗಾವಿಯಿಂದ ಗದಗ ಮಾರ್ಗವಾಗಿ ನೇರವಾಗಿ ಅಯೋಧ್ಯೆಗೆ ವಿಶೇಷ ರೈಲು ಮೂಲಕ ತಲುಪಲಿದ್ದಾರೆ. ಇನ್ನು ಗದಗ ರೈಲ್ವೆ ನಿಲ್ದಾಣದಲ್ಲಿ ಜೈ ಶ್ರೀರಾಮ ಘೋಷಣೆಯೊಂದಿಗೆ ಯಾತ್ರಿಕರು ಪ್ರಯಾಣ ಬೆಳಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Feb 17, 2024 06:56 PM
Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More