AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ದಯವಿಟ್ಟು ಭತ್ಯೆ ಕೊಡಿಸಿ ಎಂದು ವೈದ್ಯಕೀಯ ಶಿಕ್ಷಣ ಸಚಿವರ ಕಾಲಿಗೆ ಬಿದ್ದ ಜಿಮ್ಸ್​ ಸಿಬ್ಬಂದಿ

ಗದಗ: ದಯವಿಟ್ಟು ಭತ್ಯೆ ಕೊಡಿಸಿ ಎಂದು ವೈದ್ಯಕೀಯ ಶಿಕ್ಷಣ ಸಚಿವರ ಕಾಲಿಗೆ ಬಿದ್ದ ಜಿಮ್ಸ್​ ಸಿಬ್ಬಂದಿ

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Aug 27, 2023 | 7:09 PM

Share

ಗದಗಕ್ಕೆ ಬಂದಿದ್ದ ಸಚಿವರ ಬಳಿ, ‘ಕೊವಿಡ್​ ಸಮಯದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ್ದೇವೆ. ಪ್ರೋತ್ಸಾಹಧನದ ರೂಪದಲ್ಲಿ ಸರ್ಕಾರ ರಿಸ್ಕ್ ಅಲೋಯನ್ಸ್​​ ಘೋಷಿಸಿತ್ತು. ಆದರೆ, ಸರ್ಕಾರದಿಂದ ಹಣ ಮಂಜೂರಾಗಿದ್ರೂ ವೈದ್ಯಾಧಿಕಾರಿಗಳು ಮಾತ್ರ ನೀಡಿಲ್ಲ.

ಗದಗ, ಆ.27: ಇಂದು(ಆ.27) ವೈದ್ಯಕೀಯ ಸಮ್ಮೇಳನದಲ್ಲಿ ಭಾಗಿಯಾಗಲು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್ (Sharanprakash Patil)​ ಗದಗಕ್ಕೆ (Gadag) ಬಂದಿದ್ದರು. ಈ ವೇಳೆ ಕೊವಿಡ್​ ವೇಳೆ ಕರ್ತವ್ಯ ನಿರ್ವಹಿಸಿದವರಿಗೆ ಭತ್ಯೆ ನೀಡುವಂತೆ ಜಿಮ್ಸ್​ ಸಿಬ್ಬಂದಿಗಳು ಕಾಲಿಗೆ ಬಿದ್ದು ಮನವಿ ಮಾಡಿಕೊಂಡರು. ಹೌದು, ಗದಗಕ್ಕೆ ಬಂದಿದ್ದ ಸಚಿವರ ಬಳಿ, ‘ಕೊವಿಡ್​ ಸಮಯದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ್ದೇವೆ. ಪ್ರೋತ್ಸಾಹಧನದ ರೂಪದಲ್ಲಿ ಸರ್ಕಾರ ರಿಸ್ಕ್ ಅಲೋಯನ್ಸ್​​ ಘೋಷಿಸಿತ್ತು. ಆದರೆ, ಸರ್ಕಾರದಿಂದ ಹಣ ಮಂಜೂರಾಗಿದ್ರೂ ವೈದ್ಯಾಧಿಕಾರಿಗಳು ಮಾತ್ರ ನೀಡಿಲ್ಲ. ಗದಗ ಆಸ್ಪತ್ರೆ ವೈದ್ಯಾಧಿಕಾರಿಗಳು ಇನ್ನೂ ರಿಸ್ಕ್ ಅಲೋಯನ್ಸ್​​ ಕೊಟ್ಟಿಲ್ಲ. ಆದ್ದರಿಂದ ಕೊವಿಡ್ ರಿಸ್ಕ್ ಅಲೋಯನ್ಸ್​​ ಕೊಡಿಸಿ ಎಂದು ಡಿ ಗ್ರೂಪ್ ಸಿಬ್ಬಂದಿಯವರು ಮನವಿ ಮಾಡಿಕೊಂಡರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More