ಸ್ಮಶಾನವಿಲ್ಲದೆ ನಡುರಸ್ತೆಯಲ್ಲೇ ಶವಸಂಸ್ಕಾರಕ್ಕೆ ಮುಂದಾದ ಗ್ರಾಮಸ್ಥರು!

Edited By:

Updated on: Jul 15, 2026 | 10:22 AM

ಜಿಲ್ಲೆಯ ಗದಗ ತಾಲೂಕಿನ ಕಣವಿ ಹೊಸೂರು ಗ್ರಾಮದಲ್ಲಿ ಸ್ಮಶಾನವಿಲ್ಲದ ಕಾರಣ, ಮೃತ ಮಹಿಳೆಯ ಅಂತ್ಯಸಂಸ್ಕಾರವನ್ನು ನಡುರಸ್ತೆಯಲ್ಲೇ ಮಾಡಲು ಗ್ರಾಮಸ್ಥರು ಸಿದ್ಧತೆ ನಡೆಸಿ ಆಕ್ರೋಶ ಹೊರಹಾಕಿದ ಘಟನೆ ನಡೆದಿದೆ. ಅನಾರೋಗ್ಯದಿಂದ ಮೃತಪಟ್ಟ ಬಸವಣ್ಣೆಮ್ಮ (46) ಎಂಬುವವರ ಶವಸಂಸ್ಕಾರಕ್ಕೆ ಜಾಗವಿಲ್ಲದೆ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿಯವರೆಗೆ ರೈತರೊಬ್ಬರ ಜಮೀನಿನಲ್ಲಿ ಅಂತ್ಯಸಂಸ್ಕಾರ ಮಾಡಲಾಗುತ್ತಿತ್ತು. ಆದರೆ, ಈಗ ಜಮೀನಿನ ಮಾಲೀಕರು ಅದಕ್ಕೆ ನಿರಾಕರಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಗ್ರಾಮದ ಮಧ್ಯಭಾಗದ ರಸ್ತೆಯಲ್ಲೇ ಕಟ್ಟಿಗೆ ಜೋಡಿಸಿ ಅಂತ್ಯಕ್ರಿಯೆಗೆ ಮುಂದಾಗಿದ್ದಾರೆ.

ಗದಗ, ಜುಲೈ 15: ಜಿಲ್ಲೆಯ ಗದಗ ತಾಲೂಕಿನ ಕಣವಿ ಹೊಸೂರು ಗ್ರಾಮದಲ್ಲಿ ಸ್ಮಶಾನವಿಲ್ಲದ ಕಾರಣ, ಮೃತ ಮಹಿಳೆಯ ಅಂತ್ಯಸಂಸ್ಕಾರವನ್ನು ನಡುರಸ್ತೆಯಲ್ಲೇ ಮಾಡಲು ಗ್ರಾಮಸ್ಥರು ಸಿದ್ಧತೆ ನಡೆಸಿ ಆಕ್ರೋಶ ಹೊರಹಾಕಿದ ಘಟನೆ ನಡೆದಿದೆ. ಅನಾರೋಗ್ಯದಿಂದ ಮೃತಪಟ್ಟ ಬಸವಣ್ಣೆಮ್ಮ (46) ಎಂಬುವವರ ಶವಸಂಸ್ಕಾರಕ್ಕೆ ಜಾಗವಿಲ್ಲದೆ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿಯವರೆಗೆ ರೈತರೊಬ್ಬರ ಜಮೀನಿನಲ್ಲಿ ಅಂತ್ಯಸಂಸ್ಕಾರ ಮಾಡಲಾಗುತ್ತಿತ್ತು. ಆದರೆ, ಈಗ ಜಮೀನಿನ ಮಾಲೀಕರು ಅದಕ್ಕೆ ನಿರಾಕರಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಗ್ರಾಮದ ಮಧ್ಯಭಾಗದ ರಸ್ತೆಯಲ್ಲೇ ಕಟ್ಟಿಗೆ ಜೋಡಿಸಿ ಅಂತ್ಯಕ್ರಿಯೆಗೆ ಮುಂದಾಗಿದ್ದಾರೆ.

ಕ್ಷೇತ್ರದ ಶಾಸಕ ಎಚ್.ಕೆ. ಪಾಟೀಲ್ ಹಾಗೂ ತಹಶೀಲ್ದಾರರಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕಿಡಿಕಾರಿದ ಜನ, ಜಿಲ್ಲಾಡಳಿತ ತಕ್ಷಣವೇ ಸ್ಮಶಾನಕ್ಕೆ ಜಾಗ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us