ಗದಗ: ತಲೆ ಮೇಲೆ ಪಟಾಕಿ ಹೊತ್ತುಕೊಂಡು ಪುಂಡಾಟ

ಗದಗ ಜಿಲ್ಲೆ ರೋಣ ತಾಲೂಕಿನ ಕೊತಬಾಳ ಗ್ರಾಮದಲ್ಲಿ ಶ್ರೀ ಅಡವಿ ಸಿದ್ದೇಶ್ವರಾಯ ಅಜ್ಜನ ಜಾತ್ರೆಯ ರಥೋತ್ಸವದ ನಂತರ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಈ ವೇಳೆ ಯುವಕನೊಬ್ಬ ಸಿಡಿಯುತ್ತಿರುವ ಪಟಾಕಿ ಬಾಕ್ಸ್ ತಲೆಯಲ್ಲಿಟ್ಟುಕೊಂಡು ಜನಸಾಗರದ ಮಧ್ಯೆಯೇ ಅಪಾಯಕಾರಿ ಹುಚ್ಚಾಟ ಮೆರೆದಿದ್ದಾನೆ. ವಿಡಿಯೋ ಇಲ್ಲಿದೆ ನೋಡಿ.

ಗದಗ: ತಲೆ ಮೇಲೆ ಪಟಾಕಿ ಹೊತ್ತುಕೊಂಡು ಪುಂಡಾಟ
| Updated By: ಗಣಪತಿ ಶರ್ಮ

Updated on: May 27, 2024 | 12:10 PM

ಗದಗ, ಮೇ 27: ಚಿತ್ರ ವಿಚಿತ್ರ ವಿಡಿಯೋಗಳನ್ನು ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಯಬಿಡುವ ಟ್ರೆಂಡ್ ಈಗ ಸಾಮಾನ್ಯ. ರೀಲ್ಸ್​ ವಿಡಿಯೋಗಳಿಗಾಗಿ ಅಪಾಯಕಾರಿ ಸಾಹಸಕ್ಕೆ ಕೈಹಾಕುವ ಯುವ ಮಂದಿಯ ಬಗ್ಗೆ ಅಲ್ಲಲ್ಲಿ ವರದಿಯಾಗುತ್ತಿರುತ್ತವೆ. ಕೆಲವೊಬ್ಬರು ವಿಡಿಯೋಗಾಗಿ ಅಪಾಯಕಾರಿ ಸಾಹಸ ಮಾಡಲು ಹೋಗಿ ಪ್ರಾಣಾಪಾಯ ತಂದುಕೊಂಡ ಘಟನೆಗಳೂ ಕಣ್ಣಮುಂದಿವೆ. ಹೀಗಿರುವಾಗ ಗದಗ (Gadag) ಜಿಲ್ಲೆ ರೋಣ (Rona) ತಾಲೂಕಿನ ಕೊತಬಾಳ ಗ್ರಾಮದ ಜಾತ್ರೆಯೊಂದರಲ್ಲಿ ಯುವಕನೊಬ್ಬ ಸಿಡಿಯುತ್ತಿರುವ ಪಟಾಕಿ ಬಾಕ್ಸನ್ನು ತಲೆಯ ಮೇಲಿಟ್ಟುಕೊಂಡು ಹುಚ್ಚಾಟ ಮೆರೆದಿದ್ದಾನೆ. ಅದೃಷ್ಟವಶಾತ್ ಏನೂ ಅಪಾಯ ಸಂಭವಿಸಿಲ್ಲ.

ರೋಣ ತಾಲೂಕಿನ ಕೊತಬಾಳ ಗ್ರಾಮದಲ್ಲಿ ಶ್ರೀ ಅಡವಿ ಸಿದ್ದೇಶ್ವರಾಯ ಅಜ್ಜನ ಜಾತ್ರೆ ವೈಭವದಿಂದ ನೆರವೇರಿತು. ಅಡವಿ ಸಿದ್ದೇಶ್ವರರ 69ನೇ ಪುಣ್ಯ ಸ್ಮರಣೆಯ ಅಂಗವಾಗಿ ನಡೆದ ಜಾತ್ರಾ ಮಹೋತ್ಸವದಲ್ಲಿ ರಥೋತ್ಸವವೂ ವೈಭವದಿಂದ ನೆರವೇರಿತು. ರಥೋತ್ಸವ ಮುಗಿದ ಮೇಲೆ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಈ ವೇಳೆ, ಯುವಕನೊರ್ವ ತಲೆ ಮೇಲೆ ಪಟಾಕಿ ಬಾಕ್ಸ್ ಇಟ್ಟುಕೊಂಡು ಓಡಾಡಿದ್ದಾನೆ.

ಇದನ್ನೂ ಓದಿ: ಗದಗದಲ್ಲಿ ಮುಂದುವರಿದ ಮಹಿಳಾ ಕಬಡ್ಡಿ; ಪುರುಷರು ಫಿದಾ! ವಿಡಿಯೋ ಇಲ್ಲಿದೆ

ಅಂದಹಾಗೆ ಗದಗ ಜಿಲ್ಲೆಯು ಕಳೆದ ಕೆಲವು ದಿನಗಳಿಂದ ಇಂಥ ವಿಡಿಯೋಗಳಿಂದಾಗಿಯೇ ಸುದ್ದಿಯಲ್ಲಿದೆ. ನರೇಗಾ ಅಡಿ ಕೆಲಸ ನಿರ್ವಹಿಸುವ ಮಹಿಳೆಯರು ಸೀರೆಯುಟ್ಟುಕೊಂಡೇ ಕಬಡ್ಡಿ ಆಡಿದ ವಿಡಿಯೋವೊಂದು ಕೆಲವು ದಿನಗಳ ಹಿಂದೆ ವೈರಲ್ ಆಗಿತ್ತು. ಇದೀಗ ಮತ್ತೆ ಅಂಥದ್ದೇ ಒಂದು ವಿಡಿಯೋ ಸೋಮವಾರ ವೈರಲ್ ಆಗಿದೆ. ಅದರ ಬೆನ್ನಲ್ಲೇ ಯುವಕನ ಪಟಾಕಿ ಹುಚ್ಚಾಟದ ವಿಡಿಯೋ ವೈರಲ್ ಆಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ