ಮೈಸೂರು, ಅ.12: ಮೈಸೂರು ದಸರಾ ನಿಮಿತ್ತ ಕೆಲವೇ ಗಂಟೆಗಳಲ್ಲಿ ಜಂಬೂಸವಾರಿ ಆರಂಭವಾಗಲಿದ್ದು, ಈ ವರ್ಷ ಅಂಬಾರಿಯನ್ನು ಕ್ಯಾಪ್ಟನ್ ಅಭಿಮನ್ಯು ಹೊರಲಿದ್ದಾನೆ. ಕ್ಯಾಪ್ಟನ್ ಅಭಿಮನ್ಯು ಐದನೇ ಬಾರಿಗೆ ಅಂಬಾರಿ ಹೊರಲಿದ್ದಾನೆ. ಕ್ಯಾಪ್ಟನ್ ಅಭಿಮನ್ಯುವಿಗೆ ಒಂಬತ್ತು ಆನೆಗಳು ಸಾತ್ ನೀಡಲಿವೆ. ನಿಶಾನೆಯಾಗಿ ಧನಂಜಯ ಆಯ್ಕೆಯಾಗಿದ್ದಾನೆ. ಅಭಿಮನ್ಯು ಅಂಬಾರಿಯನ್ನು ಹೊತ್ತು ರಾಜಗಾಂಭಿರ್ಯದಿಂದ ರಾಜಬೀದಿಗಳಲ್ಲಿ ಹೋಗುತ್ತಿರುವುದನ್ನು ನೋಡುವುದೇ ಚಂದ. ಜಂಬೂಸವಾರಿ ಕಲವೇ ಗಂಟೆಗಳಲ್ಲಿ ಆರಂಭವಾಗಲಿದೆ. ಅದಕ್ಕೂ ಮುನ್ನ ಗಜಪಡೆ ಫೋಟೋಶೂಟ್ನಲ್ಲಿ ಭಾಗಿಯಾಗಿದೆ. ಈ ಕುರಿತು ವಿಡಿಯೋ ನೋಡಿ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:26 pm, Sat, 12 October 24