ರಾಹುಗ್ರಸ್ತ ಚಂದ್ರಗ್ರಹಣ, ಯಾವ ದಿನದಂದು ಗಣೇಶ ವಿಸರ್ಜನೆ ಮಾಡಬೇಕು ತಿಳಿಯಿರಿ

Updated on: Sep 01, 2025 | 7:15 AM

ದೈನಂದಿನ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ್ ಗುರೂಜಿ ಅವರು ಗಣೇಶ ವಿಸರ್ಜನೆಯ ಸೂಕ್ತ ಸಮಯ ಮತ್ತು ವಿಧಿವಿಧಾನಗಳ ಬಗ್ಗೆ ಮಾರ್ಗದರ್ಶನ ನೀಡಿದ್ದಾರೆ. ಗಣೇಶನನ್ನು ಒಂದೂವರೆ, ಮೂರು, ಐದು ಅಥವಾ ಏಳು ದಿನಗಳವರೆಗೆ ಇಟ್ಟುಕೊಂಡು ವಿಸರ್ಜನೆ ಮಾಡುವುದು ಒಳ್ಳೆಯದು. ಸಂಪೂರ್ಣ ವಿಡಿಯೋ ನೋಡಿ.

ಬೆಂಗಳೂರು, ಸೆಪ್ಟೆಂಬರ್​ 01: ಡಾ. ಬಸವರಾಜ್ ಗುರೂಜಿ ಅವರು ಗಣೇಶ ವಿಸರ್ಜನೆಯ ಬಗ್ಗೆ ಉಪಯುಕ್ತ ಮಾಹಿತಿಯನ್ನು ನೀಡಿದ್ದಾರೆ. ಗಣೇಶ ಚತುರ್ಥಿಯ ನಂತರ, ಸಾಮಾನ್ಯವಾಗಿ 10 ದಿನಗಳ ನಂತರ ಅನಂತ ಚತುರ್ದಶಿಯ ದಿನ ವಿಸರ್ಜನೆ ಮಾಡುವುದು ವಾಡಿಕೆ. ಆದರೆ ಈ ಬಾರಿ ರಾಹುಗ್ರಸ್ತ ಚಂದ್ರಗ್ರಹಣದಿಂದಾಗಿ ಈ ನಿಯಮ ಪಾಲಿಸಲು ಸಾಧ್ಯವಾಗದಿರಬಹುದು ಎಂದು ಅವರು ತಿಳಿಸಿದ್ದಾರೆ. ಆದ್ದರಿಂದ, ಭಕ್ತರು ಒಂದೂವರೆ, ಮೂರು, ಐದು ಅಥವಾ ಏಳು ದಿನಗಳ ನಂತರ ಗಣೇಶನನ್ನು ಗೌರವಪೂರ್ವಕವಾಗಿ ವಿಸರ್ಜನೆ ಮಾಡಬಹುದು ಎಂದು ತಿಳಿಸಿಕೊಟ್ಟಿದ್ದಾರೆ.

 

Published on: Sep 01, 2025 07:08 AM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More