ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಸಭೆಯಲ್ಲಿ ಗಂಗಾವತಿ ಟಿಕೆಟ್‌ಗಾಗಿ ಕೂಗಾಟ…ಚೀರಾಟ: ಕಾಂಗ್ರೆಸ್ ನಾಯಕರು ಕಂಗಾಲು

| Updated By: ರಮೇಶ್ ಬಿ. ಜವಳಗೇರಾ

Updated on: Dec 26, 2022 | 6:09 PM

ಗಂಗಾವತಿ ಕ್ಷೇತ್ರದ ಟಿಕೆಟ್​ಗಾಗಿ ಇಬ್ಬರ ಮಧ್ಯೆ ಪೈಪೋಟಿ ನಡೆದಿದ್ದು, ಇಬ್ಬರಿಗೂ ಗಂಗಾವತಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳೆಂದು ಬೆಂಬಲಿಗರು. ಘೋಷಣೆ ಕೂಗಿದ್ದಾರೆ. ಇಬ್ಬರು ಟಿಕೆಟ್ ಆಕಾಂಕ್ಷಿಗಳ ಬೆಂಬಲಿಗರು ಪರಸ್ಪರ ಘೋಷಣೆ ಕೂಗಿದ್ದಾರೆ.

ಕೊಪ್ಪಳ: ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಕಾಂಗ್ರೆಸ್ ಟಿಕೆಟ್​ ಹಂಚಿಕೆಗೆ​ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಶುರು ಮಾಡಿಕೊಂಡಿದೆ. ಅದರಂತೆ ಇಂದು(ಡಿಸೆಂಬರ್ 26) ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಎಐಸಿಸಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶ್ರೀಧರ ಬಾಬು ನೇತೃತ್ವದಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಈ ವೇಳೆ ದೊಡ್ಡ ಹೈಡ್ರಾಮೇ ನಡೆದಿದೆ.

ಗಂಗಾವತಿ ಕ್ಷೇತ್ರದ ಟಿಕೆಟ್​ಗಾಗಿ ಇಬ್ಬರ ಮಧ್ಯೆ ಪೈಪೋಟಿ ನಡೆದಿದ್ದು, ಇಬ್ಬರಿಗೂ ಗಂಗಾವತಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳೆಂದು ಬೆಂಬಲಿಗರು. ಘೋಷಣೆ ಕೂಗಿದ್ದಾರೆ. ಇಬ್ಬರು ಟಿಕೆಟ್ ಆಕಾಂಕ್ಷಿಗಳ ಬೆಂಬಲಿಗರು ಪರಸ್ಪರ ಘೋಷಣೆ ಕೂಗಿದ್ದಾರೆ. ಈ ವೇಳೆ ಕೂಡಲೇ ಮಧ್ಯೆ ಪ್ರವೇಶಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವರಾಜ್ ತಂಗಡಗಿ, ಯಾರು ಯಾರ ಪರ ಘೋಷಣೆ ಕೂಗದಂತೆ ತಾಕೀತು ಮಾಡಿದರು.

Follow us on