‘ಗರುಡ ಗಮನ ವೃಷಭ ವಾಹನ’ ಚಿತ್ರದ ಬಗ್ಗೆ ಪ್ರೇಕ್ಷಕರಿಗಿದ್ದ ಅನುಮಾನ ಪರಿಹರಿಸಿದ ರಾಜ್ ಬಿ. ಶೆಟ್ಟಿ
ರಾಜ್ ಬಿ. ಶೆಟ್ಟಿ ನಟನೆ ಮತ್ತು ನಿರ್ದೇಶನದ ‘ಗರುಡ ಗಮನ ವೃಷಭ ವಾಹನ’ ಸಿನಿಮಾ ಬಿಡುಗಡೆಯಾಗಿ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಈ ಸಿನಿಮಾದಲ್ಲಿ ರಾಜ್ ಬಿ. ಶೆಟ್ಟಿ ಜೊತೆ ರಿಷಬ್ ಶೆಟ್ಟಿ ಕೂಡ ಪ್ರಮುಖ ಪಾತ್ರವನ್ನು ಮಾಡಿದ್ದಾರೆ.
ರಾಜ್ ಬಿ. ಶೆಟ್ಟಿ ನಿರ್ದೇಶನದ ‘ಗರುಡ ಗಮನ ವೃಷಭ ವಾಹನ’ ಸಿನಿಮಾ ಪಕ್ಕಾ ಮಂಗಳೂರು ಸೊಗಡಿನಲ್ಲಿ ಮೂಡಿ ಬಂದಿದೆ. ಅಲ್ಲಿನ ಸಂಸ್ಕೃತಿಯ ಜತೆಗೆ ಕೆಲವೊಂದು ಕಡೆ ಸಿನಿಮಾದಲ್ಲಿ ತುಳು ಭಾಷೆಯನ್ನೂ ಬಳಕೆ ಮಾಡಲಾಗಿದೆ. ಮಂಗಳೂರು ಭಾಗದ ಜನರಿಗೆ ಬಿಟ್ಟು ಉಳಿದವರಿಗೆ ಈ ಭಾಷೆ ಅಷ್ಟೇನು ಅರ್ಥವಾಗುವುದಿಲ್ಲ. ಇಂಥ ಸಂದರ್ಭದಲ್ಲಿ ಸಾಮಾನ್ಯವಾಗಿ ಸಬ್ಟೈಟಲ್ ಬಳಕೆ ಮಾಡಲಾಗುತ್ತದೆ. ತುಳುವಿನಲ್ಲಿ ಹೇಳಿದ್ದೇನು ಎನ್ನುವುದನ್ನು ಕನ್ನಡದಲ್ಲಿ ನೀಡಲಾಗುತ್ತದೆ. ಆದರೆ, ‘ಗರುಡ ಗಮನ ವೃಷಭ ವಾಹನ’ ಸಿನಿಮಾ ಹಾಗಲ್ಲ. ಅಲ್ಲಿ ಯಾವುದೇ ಸಬ್ಟೈಟಲ್ ಬಳಕೆ ಮಾಡಿಲ್ಲ. ಹೀಗೇಕೆ ಎನ್ನುವ ಪ್ರಶ್ನೆಗೆ ರಾಜ್ ಬಿ. ಶೆಟ್ಟಿ ಉತ್ತರಿಸಿದ್ದಾರೆ.
ರಾಜ್ ಬಿ. ಶೆಟ್ಟಿ ನಟನೆ ಮತ್ತು ನಿರ್ದೇಶನದ ‘ಗರುಡ ಗಮನ ವೃಷಭ ವಾಹನ’ ಸಿನಿಮಾ ಬಿಡುಗಡೆಯಾಗಿ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಈ ಸಿನಿಮಾದಲ್ಲಿ ರಾಜ್ ಬಿ. ಶೆಟ್ಟಿ ಜೊತೆ ರಿಷಬ್ ಶೆಟ್ಟಿ ಕೂಡ ಪ್ರಮುಖ ಪಾತ್ರವನ್ನು ಮಾಡಿದ್ದಾರೆ.
ಇದನ್ನೂ ಓದಿ:GGVV Trailer: ರಾಜ್ ಬಿ ಶೆಟ್ಟಿ ಇನ್ನೊಂದು ಮುಖ ಅನಾವರಣ; ಸಾಥ್ ನೀಡಿದ ರಿಷಬ್ ಶೆಟ್ಟಿ
Published on: Nov 22, 2021 06:59 PM
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ

