Daily Devotional: ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?

Updated on: Jun 17, 2026 | 6:42 AM

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ.. ಕನಸಿನಲ್ಲಿ ಮರಣಿಸಿದ ವ್ಯಕ್ತಿಗಳು ಕಾಣಿಸಿಕೊಳ್ಳುವುದು ಸಾಮಾನ್ಯ. ಗರುಡ ಪುರಾಣದ ಪ್ರಕಾರ, ಇಂತಹ ಕನಸುಗಳಿಗೆ ನಿರ್ದಿಷ್ಟ ಅರ್ಥಗಳಿವೆ. ನಮ್ಮ ಪೂರ್ವಜರು ಅಥವಾ ಸಂಬಂಧಿಕರು ಕನಸಿನಲ್ಲಿ ಪದೇ ಪದೇ ಕಾಣಿಸಿಕೊಂಡರೆ, ಅವರ ಕಾರ್ಯಗಳನ್ನು ನೆರವೇರಿಸುವಂತೆ ಸೂಚಿಸುತ್ತಾರೆ. ಅಮಾವಾಸ್ಯೆ ಅಥವಾ ಮಹಾಲಯ ಅಮಾವಾಸ್ಯೆ ಸಂದರ್ಭಗಳಲ್ಲಿ ಕಾರ್ಯಗಳನ್ನು ನೆರವೇರಿಸುವುದು ಸೂಕ್ತ.

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ಕನಸಿನಲ್ಲಿ ಮರಣಿಸಿದ ವ್ಯಕ್ತಿಗಳು ಕಾಣಿಸಿಕೊಳ್ಳುವುದು ಸಾಮಾನ್ಯ. ಗರುಡ ಪುರಾಣದ ಪ್ರಕಾರ, ಇಂತಹ ಕನಸುಗಳಿಗೆ ನಿರ್ದಿಷ್ಟ ಅರ್ಥಗಳಿವೆ. ನಮ್ಮ ಪೂರ್ವಜರು ಅಥವಾ ಸಂಬಂಧಿಕರು ಕನಸಿನಲ್ಲಿ ಪದೇ ಪದೇ ಕಾಣಿಸಿಕೊಂಡರೆ, ಅವರ ಕಾರ್ಯಗಳನ್ನು ನೆರವೇರಿಸುವಂತೆ ಸೂಚಿಸುತ್ತಾರೆ. ಅಮಾವಾಸ್ಯೆ ಅಥವಾ ಮಹಾಲಯ ಅಮಾವಾಸ್ಯೆ ಸಂದರ್ಭಗಳಲ್ಲಿ ಕಾರ್ಯಗಳನ್ನು ನೆರವೇರಿಸುವುದು ಸೂಕ್ತ.

ಕನಸಿನಲ್ಲಿ ಮರಣಿಸಿದ ವ್ಯಕ್ತಿಗಳು ಕೋಪದಿಂದ, ಕಿರುಚಾಡುತ್ತಾ ಅಥವಾ ಕೂಗಾಡುತ್ತಾ ಕಾಣಿಸಿಕೊಂಡರೆ ಅದು ಅಶುಭದ ಸಂಕೇತ. ಅಂತಹ ಸಮಯದಲ್ಲಿ, ಇಷ್ಟದೇವರ ಅಥವಾ ಕುಲದೇವರ ದರ್ಶನ ಪಡೆದು ಪೂಜೆ ಸಲ್ಲಿಸುವುದು ಉತ್ತಮ. ಉದಾಹರಣೆಗೆ, ಕುಲದೇವರು ವೆಂಕಟೇಶ್ವರನಾಗಿದ್ದರೆ, ದೇವಾಲಯಕ್ಕೆ ಹೋಗಿ ಅರ್ಚನೆ ಮಾಡಿಸಬಹುದು.

ಮರಣಿಸಿದವರು ಕನಸಿನಲ್ಲಿ ಸೈಲೆಂಟ್ ಆಗಿ ಅಥವಾ ಶಾಂತವಾಗಿ ಕಾಣಿಸಿಕೊಂಡರೆ, ಅದು ನಮಗೆ ಜವಾಬ್ದಾರಿಗಳನ್ನು ನೆನಪಿಸುವ ಅಥವಾ ಎಚ್ಚರಿಕೆ ನೀಡುವ ಸೂಚನೆಯಾಗಿದೆ ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.

 

Follow Us