ಬದುಕು ಬದಲಿಸಿದ ‘ಕೆಜಿಎಫ್’: ಪ್ರಶಾಂತ್ ನೀಲ್ಗೆ ಧನ್ಯವಾದ ತಿಳಿಸಿದ ಗರುಡ ರಾಮ್
ಕನ್ನಡ ಚಿತ್ರರಂಗದಲ್ಲಿ ಗರುಡ ರಾಮ್ ಅವರು ಖಡಕ್ ನಟನಾಗಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಈ ಇಮೇಜ್ ಸಿಕ್ಕಿದ್ದು ‘ಕೆಜಿಎಫ್’ ಸಿನಿಮಾದಿಂದ. ಈಗ ಅವರು ‘ಬಘೀರ’ ಸಿನಿಮಾದಲ್ಲಿ ಕೂಡ ಪ್ರಮುಖ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆಜಿಎಫ್’ ಸಿನಿಮಾ ತೆರೆಕಂಡ ಬಳಿಕ ಅವರಿಗೆ ಹಲವು ಅವಕಾಶಗಳು ಸಿಕ್ಕವು. ಆ ಬಗ್ಗೆ ಅವರು ಮಾತನಾಡಿದ್ದಾರೆ.
‘ನಾನು ಪ್ರಶಾಂತ್ ನೀಲ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಸ್ಥಾನದಲ್ಲಿ ನಾನು ಕುಳಿತು ಮಾತನಾಡುತ್ತಿದ್ದೇನೆ ಅಂದರೆ ಅದರ ಕ್ರೆಡಿಟ್ ಪ್ರಶಾಂತ್ ನೀಲ್ ಅವರಿಗೆ ಸಲ್ಲಬೇಕು. ಇಲ್ಲಿಯ ತನಕ ಒಳ್ಳೊಳೆಯ ಸಿನಿಮಾಗಳನ್ನು ಮಾಡುತ್ತಾ ಬಂದಿದ್ದೇನೆ. ಈಗ ‘ಬಘೀರ’ ಸಿನಿಮಾ ಮೇಲೆ ಗಮನ ಹರಿಸಿದ್ದೇನೆ. ಆ ಸಿನಿಮಾ ರಿಲೀಸ್ ಆಗಿ ಕೆಲವು ದಿನಗಳು ಕಳೆದ ಬಳಿಕ ಬೇರೆ ಸಿನಿಮಾಗಳ ಬಗ್ಗೆ ಹೇಳುತ್ತೇನೆ’ ಎಂದು ಗರುಡ ರಾಮ್ ಅವರು ಹೇಳಿದ್ದಾರೆ. ‘ಬಘೀರ’ ಸಿನಿಮಾ ಅಕ್ಟೋಬರ್ 31ರಂದು ಬಿಡುಗಡೆ ಆಗಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
