ಬದುಕು ಬದಲಿಸಿದ ‘ಕೆಜಿಎಫ್’: ಪ್ರಶಾಂತ್ ನೀಲ್​ಗೆ ಧನ್ಯವಾದ ತಿಳಿಸಿದ ಗರುಡ ರಾಮ್

| Updated By: ಮದನ್​ ಕುಮಾರ್​

Updated on: Oct 23, 2024 | 10:59 PM

ಕನ್ನಡ ಚಿತ್ರರಂಗದಲ್ಲಿ ಗರುಡ ರಾಮ್ ಅವರು ಖಡಕ್ ನಟನಾಗಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಈ ಇಮೇಜ್ ಸಿಕ್ಕಿದ್ದು ‘ಕೆಜಿಎಫ್​’ ಸಿನಿಮಾದಿಂದ. ಈಗ ಅವರು ‘ಬಘೀರ’ ಸಿನಿಮಾದಲ್ಲಿ ಕೂಡ ಪ್ರಮುಖ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆಜಿಎಫ್’ ಸಿನಿಮಾ ತೆರೆಕಂಡ ಬಳಿಕ ಅವರಿಗೆ ಹಲವು ಅವಕಾಶಗಳು ಸಿಕ್ಕವು. ಆ ಬಗ್ಗೆ ಅವರು ಮಾತನಾಡಿದ್ದಾರೆ.

‘ನಾನು ಪ್ರಶಾಂತ್ ನೀಲ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಸ್ಥಾನದಲ್ಲಿ ನಾನು ಕುಳಿತು ಮಾತನಾಡುತ್ತಿದ್ದೇನೆ ಅಂದರೆ ಅದರ ಕ್ರೆಡಿಟ್ ಪ್ರಶಾಂತ್ ನೀಲ್ ಅವರಿಗೆ ಸಲ್ಲಬೇಕು. ಇಲ್ಲಿಯ ತನಕ ಒಳ್ಳೊಳೆಯ ಸಿನಿಮಾಗಳನ್ನು ಮಾಡುತ್ತಾ ಬಂದಿದ್ದೇನೆ. ಈಗ ‘ಬಘೀರ’ ಸಿನಿಮಾ ಮೇಲೆ ಗಮನ ಹರಿಸಿದ್ದೇನೆ. ಆ ಸಿನಿಮಾ ರಿಲೀಸ್ ಆಗಿ ಕೆಲವು ದಿನಗಳು ಕಳೆದ ಬಳಿಕ ಬೇರೆ ಸಿನಿಮಾಗಳ ಬಗ್ಗೆ ಹೇಳುತ್ತೇನೆ’ ಎಂದು ಗರುಡ ರಾಮ್ ಅವರು ಹೇಳಿದ್ದಾರೆ. ‘ಬಘೀರ’ ಸಿನಿಮಾ ಅಕ್ಟೋಬರ್​ 31ರಂದು ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us on