ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!
ಇನ್ನೇನು ಬೇಸಿಗೆ ಕಳೆದು ಮಳೆಗಾಲ ಶುರುವಾಗಲಿದೆ. ಹೀಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಎಲ್ಲಾ ಪಾಲಿಕೆಗಳ ಆಯುಕ್ತರು ಹಾಗೂ ಜಿಬಿಎ ಅಧಿಕಾರಿಗಳಿಗೆ ಮಳೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ನೀಡಲಾಗಿದೆ. ಆದರೂ ಅಧಿಕಾರಿಗಳು ಇನ್ನೂ ಎಚ್ಚೆತ್ತುಕೊಂಡಿಲ್ಲ. ಹೌದು..ನಗರದ ಹಲವು ಏರಿಯಾಗಳಲ್ಲಿ ಅಪಾಯಕಾರಿ ಮರಗಳು ಜನರನ್ನು ಬಲಿಪಡೆಯಲು ಕಾದು ಕುಳಿತಿವೆ. ರಾಜಾಜಿನಗರದ 13ನೇ ಮುಖ್ಯ ರಸ್ತೆಯಲ್ಲಿ ಮರದ ಕೊಂಬೆಗಳು ನೇತಾಡುತ್ತಿದ್ದು, ಯಾವಾಗ ಬೀಳುತ್ತೋ ಎನ್ನುವ ಭಯದಲ್ಲಿ ಓಡಾಡುವಂತಾಗಿದೆ. ಈ ಬಗ್ಗೆ ಸ್ಥಳೀಯರು ಸಹ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಅನಾಹುತಕ್ಕೂ ಮುನ್ನ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಒತ್ತಾಯಿಸಿದ್ದಾರೆ.
ಬೆಂಗಳೂರು, (ಮೇ 17): ಇನ್ನೇನು ಬೇಸಿಗೆ ಕಳೆದು ಮಳೆಗಾಲ ಶುರುವಾಗಲಿದೆ. ಹೀಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಎಲ್ಲಾ ಪಾಲಿಕೆಗಳ ಆಯುಕ್ತರು ಹಾಗೂ ಜಿಬಿಎ ಅಧಿಕಾರಿಗಳಿಗೆ ಮಳೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ನೀಡಲಾಗಿದೆ. ಆದರೂ ಅಧಿಕಾರಿಗಳು ಇನ್ನೂ ಎಚ್ಚೆತ್ತುಕೊಂಡಿಲ್ಲ. ಹೌದು..ನಗರದ ಹಲವು ಏರಿಯಾಗಳಲ್ಲಿ ಅಪಾಯಕಾರಿ ಮರಗಳು ಜನರನ್ನು ಬಲಿಪಡೆಯಲು ಕಾದು ಕುಳಿತಿವೆ. ರಾಜಾಜಿನಗರದ 13ನೇ ಮುಖ್ಯ ರಸ್ತೆಯಲ್ಲಿ ಮರದ ಕೊಂಬೆಗಳು ನೇತಾಡುತ್ತಿದ್ದು, ಯಾವಾಗ ಬೀಳುತ್ತೋ ಎನ್ನುವ ಭಯದಲ್ಲಿ ಓಡಾಡುವಂತಾಗಿದೆ. ಈ ಬಗ್ಗೆ ಸ್ಥಳೀಯರು ಸಹ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಅನಾಹುತಕ್ಕೂ ಮುನ್ನ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಒತ್ತಾಯಿಸಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
