ಪ್ರಚಾರದ ನಡುವೆ ಯುಗಾದಿ; ಅಭಿಮಾನಿ ಮನೆಯಲ್ಲಿ ಶಿವಣ್ಣ-ಗೀತಾ ಹೋಳಿಗೆ ಊಟ

Updated on: Apr 09, 2024 | 5:30 PM

ಗೀತಾ ಹಾಗೂ ಶಿವರಾಜ್​ಕುಮಾರ್​ ಅವರು ಈಗ ಶಿವಮೊಗ್ಗದಲ್ಲಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಅವರು ನಿರತರಾಗಿದ್ದಾರೆ. ಈ ನಡುವೆ ಯುಗಾದಿ ಹಬ್ಬ ಬಂದಿದ್ದು, ಅಭಿಮಾನಿಗಳ ಮನೆಯಲ್ಲಿ ಶಿವಣ್ಣ ಮತ್ತು ಗೀತಾ ಹೋಳಿಗೆ ಊಟ ಸವಿದಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಗೀತಾ ಶಿವರಾಜ್​ ಕುಮಾರ್​ ಅವರು ಚುನಾವಣಾ ಕಣಕ್ಕೆ ಇಳಿದಿದ್ದಾರೆ.

ನಿರ್ಮಾಪಕಿ ಗೀತಾ ಶಿವರಾಜ್​ಕುಮಾರ್​ (Geetha Shivarajkumar) ಅವರು ಚುನಾವಣಾ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಕಾಂಗ್ರೆಸ್​ ಪಕ್ಷದಿಂದ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಅವರ ಪರವಾಗಿ ಶಿವರಾಜ್​ಕುಮಾರ್​ ಅವರು ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಅವರು ಪ್ರವಾಸ ಕೈಗೊಂಡಿದ್ದಾರೆ. ಮನೆಮನೆಗೂ ತೆರಳಿ ಮತ ಕೇಳುತ್ತಿದ್ದಾರೆ. ಇದರ ನಡುವೆಯೇ ಯುಗಾದಿ ಹಬ್ಬ (Ugadi 2024) ಬಂದಿದೆ. ಈಗ ಗೀತಾ ಮತ್ತು ಶಿವರಾಜ್​ಕುಮಾರ್​ ಅವರು ಶಿವಮೊಗ್ಗದಲ್ಲಿದ್ದಾರೆ. ಅಭಿಮಾನಿಗಳ ಮನೆಯಲ್ಲಿ ಅವರು ಹಬ್ಬದ ಊಟ ಸವಿದಿದ್ದಾರೆ. ಹೋಳಿಗೆ ಊಟ ಮಾಡಿದ ವಿಡಿಯೋ ಇಲ್ಲಿದೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಪುತ್ರಿ ಗೀತಾ ಅವರು ಈ ಮೊದಲು ಕೂಡ ಚುನಾವಣೆಗೆ ಸ್ಪರ್ಧಿಸಿದ್ದರು. ಈಗ ಅವರು ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಅವರ ಪರವಾಗಿ ಚಿತ್ರರಂಗದ ಅನೇಕರು ಬೆಂಬಲ ಸೂಚಿಸಿದ್ದಾರೆ. ಶಿವರಾಜ್​ಕುಮಾರ್​ (Shivarajkumar) ಅವರು ಸದ್ಯಕ್ಕೆ ಸಿನಿಮಾ ಕೆಲಸಗಳಿಗೆ ಸಣ್ಣ ಬ್ರೇಕ್​ ನೀಡಿದ್ದಾರೆ. ಪತ್ನಿಯ ಪರವಾಗಿ ಅವರು ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಇತ್ತೀಚೆಗೆ ಅವರಿಗೆ ಅನಾರೋಗ್ಯ ಉಂಟಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಈಗ ಚೇತರಿಸಿಕೊಂಡು ಮತ್ತೆ ಆ್ಯಕ್ಟೀವ್​ ಆಗಿ ಪ್ರಚಾರ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More