AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಚಿತ್ರರಂಗದ ಪರವಾಗಿ ನಿಲ್ತೀನಿ’; ಭರವಸೆ ಕೊಟ್ಟ ಗೀತಾ ಶಿವರಾಜ್​ಕುಮಾರ್

‘ನಾನು ಚಿತ್ರರಂಗದ ಪರವಾಗಿ ನಿಲ್ತೀನಿ’; ಭರವಸೆ ಕೊಟ್ಟ ಗೀತಾ ಶಿವರಾಜ್​ಕುಮಾರ್

ರಾಜೇಶ್ ದುಗ್ಗುಮನೆ
|

Updated on: Mar 19, 2024 | 11:32 AM

Share

ಗೀತಾ ಶಿವರಾಜ್​ಕುಮಾರ್ ಶಿವಮೊಗ್ಗದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. ಅವರಿಗೆ ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಕ್ಕಿದೆ. ‘ಚಲನಚಿತ್ರದ ಪರವಾಗಿ ನಾನು ಧ್ವನಿ ಆಗುತ್ತೇನೆ. ಶಿವಮೊಗ್ಗದ ಪರವಾಗಿ ನಿಲ್ಲುತ್ತೇನೆ. ಮಹಿಳೆಯರ ಪರವಾಗಿ ನಾನು ನಿಲ್ಲುತ್ತೇನೆ’ ಎಂದಿದ್ದಾರೆ ಗೀತಾ ಶಿವರಾಜ್​ಕುಮಾರ್.

ಗೀತಾ ಶಿವರಾಜ್​ಕುಮಾರ್ (Geetha Shivarajkumar) ಶಿವಮೊಗ್ಗದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. ಅವರಿಗೆ ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಕ್ಕಿದೆ. ‘ಚಲನಚಿತ್ರದ ಪರವಾಗಿ ನಾನು ಧ್ವನಿ ಆಗುತ್ತೇನೆ. ಶಿವಮೊಗ್ಗದ ಪರವಾಗಿ ನಿಲ್ಲುತ್ತೇನೆ. ಮಹಿಳೆಯರ ಪರವಾಗಿ ನಾನು ನಿಲ್ಲುತ್ತೇನೆ’ ಎಂದಿದ್ದಾರೆ ಗೀತಾ ಶಿವರಾಜ್​ಕುಮಾರ್. ಈಗಾಗಲೇ ಗೀತಾ ಶಿವರಾಜ್​ಕುಮಾರ್ ಅವರಿಗೆ ನಿರ್ಮಾಪಕರ ಸಂಘದಿಂದ ಬೆಂಬಲ ಸಿಕ್ಕಿದೆ. ಶಿವಮೊಗ್ಗದಲ್ಲಿ ಬಿಜೆಪಿಯಿಂದ ಬಿವೈ ರಾಘವೇಂದ್ರ ಹಾಗೂ ಸ್ವತಂತ್ರ ಅಭ್ಯರ್ಥಿಯಾಗಿ ಈಶ್ವರಪ್ಪ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಈ ಕಾರಣದಿಂದ ಸ್ಪರ್ಧೆ ಹೆಚ್ಚು ಆಸಕ್ತಿದಾಯಕ ಎನಿಸಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More