‘ಒಳ್ಳೆಯ ಅಂತರದಲ್ಲಿ ಗೀತಾ ಶಿವರಾಜ್​ಕುಮಾರ್​ ಗೆಲ್ಲುತ್ತಾರೆ’: ಭವಿಷ್ಯ ನುಡಿದ ಎಸ್​. ನಾರಾಯಣ್​

‘ಶಿವಮೊಗ್ಗದಲ್ಲಿ ಗೀತಾ ಶಿವರಾಜ್​ಕುಮಾರ್​ ಅವರು ದೊಡ್ಡ ಬಹುಮತ ಪಡೆದು ಗೆಲ್ಲುತ್ತಾರೆ. ಅದು ಖಂಡಿತಾ’ ಎಂದು ನಿರ್ದೇಶಕ ಎಸ್​. ನಾರಾಯಣ್​ ಹೇಳಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿಗಳ ಪರವಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅವರು ಪ್ರಚಾರ ಮಾಡುತ್ತಿದ್ದಾರೆ. ಚಿತ್ರರಂಗದ ಅನೇಕರು ಗೀತಾ ಶಿವರಾಜ್​ಕುಮಾರ್​ ಅವರಿಗೆ ಬೆಂಬಲ ನೀಡಿದ್ದಾರೆ. ಮೇ 7ರಂದು ಕರ್ನಾಟಕದಲ್ಲಿ 2ನೇ ಹಂತದ ಮತದಾನ ನಡೆಯಲಿದೆ.

‘ಒಳ್ಳೆಯ ಅಂತರದಲ್ಲಿ ಗೀತಾ ಶಿವರಾಜ್​ಕುಮಾರ್​ ಗೆಲ್ಲುತ್ತಾರೆ’: ಭವಿಷ್ಯ ನುಡಿದ ಎಸ್​. ನಾರಾಯಣ್​
|

Updated on: Apr 30, 2024 | 8:40 PM

ನಟ, ನಿರ್ದೇಶಕ ಎಸ್​. ನಾರಾಯಣ್​ ಅವರು ಕಾಂಗ್ರೆಸ್​ (Congress) ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ವಿವಿಧ ಲೋಕಸಭಾ ಕ್ಷೇತ್ರಗಳಿಗೆ ಹೋಗಿ ಅವರು ಕಾಂಗ್ರೆಸ್​ ಅಭ್ಯರ್ಥಿಗಳಿಗೆ ಬೆಂಬಲ ನೀಡಿದ್ದಾರೆ. ಇಂದು (ಏಪ್ರಿಲ್​ 30) ಅವರು ಬಾಗಲಕೋಟೆಯಲ್ಲಿ ಪ್ರಚಾರ ಮಾಡಿದ್ದಾರೆ. ಈ ವೇಳೆ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಆಗ ಅವರಿಗೆ ಶಿವಮೊಗ್ಗದ ಕಾಂಗ್ರೆಸ್​ ಅಭ್ಯರ್ಥಿ ಗೀತಾ ಶಿವರಾಜ್​ಕುಮಾರ್ (Geetha Shivarajkumar)​ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಶಿವಮೊಗ್ಗದ ಲೋಕಸಭಾ ಚುನಾವಣೆಯಲ್ಲಿ ಗೀತಾ ಶಿವರಾಜ್​ಕುಮಾರ್​ ಗೆದ್ದೇ ಗೆಲ್ಲುತ್ತಾರೆ ಎಂದು ಎಸ್​​. ನಾರಾಯಣ್​ (S Narayan) ಭವಿಷ್ಯ ನುಡಿದಿದ್ದಾರೆ. ‘ಗೀತಾ ಶಿವರಾಜ್​ಕುಮಾರ್​ ಅವರು ಈ ಬಾರಿ ಶಿವಮೊಗ್ಗದಲ್ಲಿ ಗೆಲ್ಲುತ್ತಾರೆ. ಕಾರಣ ನಿಮಗೂ ಗೊತ್ತಿದೆ. ಒಳ್ಳೆಯ ಅಂತರದಲ್ಲೇ ಗೆಲ್ಲುತ್ತಾರೆ. ಆ ಕ್ಷೇತ್ರದಲ್ಲಿ ಇಬ್ಬರು ಪ್ರಭಾವಿಗಳ ನಡುವೆ ಘರ್ಷಣೆ ಇದೆ. ಅದು ಗೀತಾಗೆ ಅನುಕೂಲ ಆಗತ್ತೆ. ಈ ಹಿಂದೆ ಗೀತಾ ಅವರು ಅಲ್ಲಿ ಸೋಲು ಕಂಡಿದ್ದರು. ಆ ಸೋಲಿನ ಅನುಕಂಪ ಹೆಣ್ಣುಮಕ್ಕಳಿಗೆ ಇದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಹೆಣ್ಮಕ್ಕಳು ಕಾಂಗ್ರೆಸ್​ ಅಲ್ಲದೇ ಬೇರೆ ಯಾವುದೇ ಪಕ್ಷಕ್ಕೆ ಮತ ಹಾಕಬಾರದು ಅಂತ ನಿರ್ಧರಿಸಿದ್ದಾರೆ. ಬಂಗಾರಪ್ಪನವರು ಆ ಜಿಲ್ಲೆಗೆ ಬಹಳ ಕೊಡುಗೆ ನೀಡಿದ್ದಾರೆ. ನಾನು ಕೂಡ ಅದೇ ಜಿಲ್ಲೆಯ ಭದ್ರಾವತಿಯವನು. ಹಾಗಾಗಿ ನನಗೆ ಗೊತ್ತಿದೆ. ಅಲ್ಲಿ ಕಾಂಗ್ರೆಸ್​ ಗೆಲ್ಲುತ್ತದೆ’ ಎಂದು ಎಸ್​. ನಾರಾಯಣ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ