ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ, ಹೆಬ್ಬುಲಿ ಕಂಡು ಭೀತಿಯಲ್ಲಿ ಗ್ರಾಮಸ್ಥರು

Edited By:

Updated on: Dec 24, 2025 | 12:58 PM

ಚಾಮರಾಜನಗರ ಹುಲಿ ಮೀಸಲು ಅರಣ್ಯಗಳಲ್ಲಿ ಹುಲಿ ಸಂತತಿ ಗಣನೀಯ ಹೆಚ್ಚಳವಾಗರುವುದು ಗಮನಕ್ಕೆ ಬಂದಿದೆ. ಎಲ್ಲೆಂದರಲ್ಲಿ ಹುಲಿಗಳು ಕಾಣಿಸಿಕೊಂಡು, ಕಾಡಂಚಿನ ಗ್ರಾಮಸ್ಥರಲ್ಲಿ ಭಯಹುಟ್ಟಿಸುತ್ತಿವೆ. ಬೃಹತ್ ಗಂಡು ಹುಲಿಯೊಂದು ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ನ ಕೆ.ಗುಡಿ ಸಮೀಪ ಕಾಣಿಸಿದ್ದು, ಗಡಿಭಾಗದ ಜನರಲ್ಲಿ ಭೀತಿ ಮೂಡಿಸಿದೆ. ಸಾರ್ವಜನಿಕರು ಅರಣ್ಯ ಪ್ರದೇಶಕ್ಕೆ ತೆರಳುವಾಗ ಎಚ್ಚರಿಕೆ ವಹಿಸುವಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ.

ಚಾಮರಾಜನಗರ, ಡಿಸೆಂಬರ್ 24: ಗಡಿನಾಡು ಚಾಮರಾಜನಗರ ಜಿಲ್ಲೆಯಲ್ಲಿ ಹುಲಿ ಸಂತತಿ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಿರುವುದು ಅರಣ್ಯ ಇಲಾಖೆ ಗಮನಕ್ಕೆ ಬಂದಿದೆ. ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್, ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್ ಹಾಗೂ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಹುಲಿಗಳ ಸಂಖ್ಯೆ ಏರಿಕೆಯಾಗಿದ್ದು, ದಿನಕ್ಕೊಂದು ಕಡೆ ವ್ಯಾಘ್ರಗಳು ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಭಯ ಮೂಡಿಸುತ್ತಿವೆ. ಇತ್ತೀಚೆಗೆ ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ನ ಕೆ.ಗುಡಿ ಸಮೀಪ ಬೃಹತ್ ಗಂಡು ಹುಲಿ ಪ್ರತ್ಯಕ್ಷವಾಗಿದ್ದು, ತನ್ನ ವ್ಯಾಪ್ತಿಯಲ್ಲಿ ಮತ್ತೊಂದು ಹುಲಿ ಓಡಾಟ ನಡೆಸಿದ್ದೇನೋ ಎಂಬ ಅನುಮಾನದಿಂದ ಮರಗಳ ಎಲೆ, ಕೊಂಬೆಗಳ ಬಳಿ ತೆರಳಿ ವಾಸನೆ ಪರಿಶೀಲಿಸುತ್ತಿರುವ ದೃಶ್ಯ ಕಂಡುಬಂದಿದೆ. ಈ ವೇಳೆ ಹುಲಿಯ ಓಡಾಟದ ದೃಶ್ಯವನ್ನು ವಾಹನ ಸವಾರರೊಬ್ಬರು ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ.

ವಿಡಿಯೋದಲ್ಲಿ ಕ್ಯಾಮರಾವನ್ನು ಗಮನಿಸಿದ ಬೃಹತ್ ವ್ಯಾಘ್ರ ಗರ್ಜಿಸಿರುವುದು ಸ್ಪಷ್ಟವಾಗಿ ಕಾಣಿಸಿದೆ. ಇದರಿಂದ ಭಯಗೊಂಡ ವಾಹನ ಸವಾರ ಅಲ್ಲಿಂದ ತಕ್ಷಣ ಕಾಲ್ಕಿತ್ತಿದ್ದಾರೆ. ಈ ಬೃಹದಾಕಾರದ ಹುಲಿ ಓಡಾಟದ ವಿಡಿಯೋ ‘ಟಿವಿ9’ಗೆ ಲಭ್ಯವಾಗಿದೆ.

ಅರಣ್ಯ ತಜ್ಞರ ಪ್ರಕಾರ, ಒಂದು ಗಂಡು ಹುಲಿ ಸರಾಸರಿ 2 ಕಿಲೋಮೀಟರ್ ವ್ಯಾಪ್ತಿಯಲ್ಲಿ ತನ್ನ ಪ್ರಭುತ್ವ ಗುರುತು ಮಾಡಿಕೊಂಡಿರುತ್ತದೆ. ಆ ಪ್ರದೇಶಕ್ಕೆ ಮತ್ತೊಂದು ಗಂಡು ಹುಲಿ ಪ್ರವೇಶಿಸಿದರೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಸಂತಾನೋತ್ಪತ್ತಿ ಸಮಯದಲ್ಲಿ ಮಾತ್ರ ಹೆಣ್ಣು ಹುಲಿಗಳನ್ನು ತನ್ನ ವ್ಯಾಪ್ತಿಗೆ ಬಿಟ್ಟುಕೊಳ್ಳುವುದು ಗಂಡು ಹುಲಿಗಳ ಸಹಜ ಗುಣಲಕ್ಷಣವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Dec 24, 2025 12:57 PM
Follow Us
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More