ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ ಶೆಟ್ಟಿ: ಕಾವ್ಯಾ ಖಡಕ್ ತಿರುಗೇಟು

Updated on: Dec 21, 2025 | 2:15 PM

ಗಿಲ್ಲಿ ನಟ ಅವರನ್ನು ಬಿಗ್ ಬಾಸ್ ಮನೆಯಿಂದ ಹೊರಗೆ ಕಳಿಸುವುದಾಗಿ ರಕ್ಷಿತಾ ಶೆಟ್ಟಿ ಹೇಳಿದ್ದಾರೆ. ಅವರಿಗೆ ಕಾವ್ಯ ಶೈವ ತಿರುಗೇಟು ನೀಡಿದ್ದಾರೆ. ‘ಕಾನ್ಫಿಡೆನ್ಸ್ ಇರಬೇಕು. ಆದರೆ ಅವಳಿಗೆ ಓವರ್ ಕಾನ್ಫಿಡೆನ್ಸ್ ಇದೆ’ ಎಂದು ಕಿಚ್ಚ ಸುದೀಪ್ ಎದುರಲ್ಲೇ ಕಾವ್ಯ ಶೈವ ಅವರು ಹೇಳಿದ್ದಾರೆ.

ಈ ಬಾರಿ ಬಿಗ್ ಬಾಸ್ ಗೆಲ್ಲೋದು ಯಾರು ಎಂಬ ಚರ್ಚೆ ಜೋರಾಗಿದೆ. ಗಿಲ್ಲಿ ನಟ (Gilli Nata) ಅವರೇ ಈ ಬಾರಿ ವಿನ್ ಆಗುತ್ತಾರೆ ಎಂಬುದು ಬಹುತೇಕರ ಅಭಿಪ್ರಾಯ. ಕಾಮಿಡಿ ಮೂಲಕ ಅವರು ಎಲ್ಲರನ್ನೂ ರಂಜಿಸುತ್ತಿದ್ದಾರೆ. ವೀಕ್ಷಕರಿಗೆ ಅವರ ಕಾಮಿಡಿ ಇಷ್ಟ ಆಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ ಹತ್ತಿರ ಆಗುತ್ತಿರುವಾಗ ಪೈಪೋಟಿ ಹೆಚ್ಚಿದೆ. ಗಿಲ್ಲಿ ನಟ ಅವರನ್ನು ಬಿಗ್ ಬಾಸ್ ಮನೆಯಿಂದ ಹೊರಗೆ ಕಳಿಸುವುದಾಗಿ ರಕ್ಷಿತಾ ಶೆಟ್ಟಿ (Rakshitha Shetty) ಹೇಳಿದ್ದಾರೆ. ಅವರಿಗೆ ಕಾವ್ಯ ಶೈವ ಮಾತಿನ ಪಂಚ್ ನೀಡಿದ್ದಾರೆ. ‘ಬಿಗ್ ಬಾಸ್ ಮನೆಯಲ್ಲಿ ಅವಳು ಇಲ್ಲದೇ ಸ್ಪಾರ್ಕ್ ಇರಲ್ಲ ಎಂಬ ಭ್ರಮೆಯಲ್ಲಿ ಇದ್ದಾಳೆ. ಕಾನ್ಫಿಡೆನ್ಸ್ ಇರಬೇಕು. ಆದರೆ ಅವಳಿಗೆ ಓವರ್ ಕಾನ್ಫಿಡೆನ್ಸ್ ಇದೆ’ ಎಂದು ಕಿಚ್ಚ ಸುದೀಪ್ ಎದುರಲ್ಲೇ ಕಾವ್ಯ (Kavya Shaiva) ಅವರು ಹೇಳಿದ್ದಾರೆ. ಭಾನುವಾರದ (ಡಿ.21) ಸಂಚಿಕೆಯ ಪ್ರೋಮೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More