ಬಾಲಕಿ ದತ್ತು ಪ್ರಕರಣ; ಸೋನು ಶ್ರೀನಿವಾಸ್​ ಗೌಡ ಬಗ್ಗೆ ಗ್ರಾಮಸ್ಥರು ಹೇಳಿದ್ದೇನು?

Updated on: Mar 24, 2024 | 9:07 PM

ಪೊಲೀಸ್​ ಕಸ್ಟಡಿಯಲ್ಲಿ ಇರುವ ಸೋನು ಶ್ರೀನಿವಾಸ್​ ಗೌಡ ಅವರನ್ನು ರಾಯಚೂರಿಗೆ ಕರೆದುಕೊಂಡ ಹೋಗಿ ಸ್ಥಳ ಮಹಜರು ಮಾಡಲಾಗಿದೆ. ಈ ವೇಳೆ ಗ್ರಾಮಸ್ಥರು ಪ್ರತಿಕ್ರಿಯೆ ನೀಡಿದ್ದಾರೆ. ‘ಪ್ರೀತಿ-ವಿಶ್ವಾಸಕ್ಕೆ ಈ ರೀತಿ ಆಗಿದೆ. ದತ್ತು ತೆಗೆದುಕೊಂಡಿಲ್ಲ. ಹೆಣ್ಣು ಮಗಳನ್ನು ಶಾಲೆ ಓದಿಸುತ್ತೇನೆ ಎಂದು ಕರೆದುಕೊಂಡು ಹೋಗಿದ್ದಾರೆ’ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಬಾಲಕಿಯನ್ನು ಕಾನೂನುಬಾಹಿರವಾಗಿ ದತ್ತು ಪಡೆದುಕೊಂಡ ಆರೋಪವನ್ನು ಸೋನು ಶ್ರೀನಿವಾಸ್​ ಗೌಡ (Sonu Srinivas Gowda) ಎದುರಿಸುತ್ತಿದ್ದಾರೆ. ಅವರನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಸದ್ಯ ಪೊಲೀಸ್​ ಕಸ್ಟಡಿಯಲ್ಲಿ ಇರುವ ಸೋನು ಗೌಡ ಅವರನ್ನು ರಾಯಚೂರಿಗೆ ಕರೆದುಕೊಂಡ ಹೋಗಿ ಮಹಜರು ಮಾಡಲಾಗಿದೆ. ಆ ಬಳಿಕ ಗ್ರಾಮಸ್ಥರು ಪ್ರತಿಕ್ರಿಯೆ ನೀಡಿದ್ದಾರೆ. ‘ಅಕ್ರಮವಾಗಿ ಅನ್ನೋಕೆ ಆಗಲ್ಲ. ದತ್ತು ತಗೊಂಡಿಲ್ಲ. ಪ್ರೀತಿ ವಿಶ್ವಾಸಕ್ಕೆ ಈ ರೀತಿ ಆಗಿದೆ. ಹೆಣ್ಣು ಮಗಳನ್ನು ಶಾಲೆ ಓದಿಸುತ್ತೇನೆ ಎಂದು ಕರೆದುಕೊಂಡು ಹೋಗಿದ್ದಾರೆ. ಮತ್ತೆ ಬೇರೆ ಏನೂ ಇಲ್ಲ. ಆಮಿಷಕ್ಕೆ ಒಳಗಾಗಿಲ್ಲ. ನಮ್ಮ ರೈತರ ಜೀವನದಲ್ಲಿ ಮುಂದೆ ಎಂದಿಗೂ ಈ ರೀತಿ ಆಗಬಾರದು. ತಂದೆ-ತಾಯಿಯ ಬೆಂಬಲವಾಗಿ ನಾವು ಇದ್ದೇವೆ’ ಎಂದು ಗ್ರಾಮಸ್ಥರು ಹೇಳಿದ್ದಾರೆ. ಶುಕ್ರವಾರ (ಮಾರ್ಚ್​ 22) ಮಾಧ್ಯಮಗಳ ಎದುರು ಸೋನು ಗೌಡ (Sonu Gowda) ಅವರು ಮೊದಲ ಪ್ರತಿಕ್ರಿಯೆ ನೀಡಿದ್ದರು. ‘ತೊಂದರೆ ಏನೂ ಇಲ್ಲ. ಕಾನೂನಿನ ಪ್ರಕಾರ ತನಿಖೆ ನಡೆಯುತ್ತಿದೆ. ಹುಡುಗಿಯನ್ನು ರಕ್ಷಣೆ ಮಾಡೋಕೆ ಅಂತ ನಾನು ಕರೆದುಕೊಂಡ ಬಂದಿದ್ದು. ಅವಳು ಈಗಲೂ ಆರಾಮಾಗಿ, ಸುರಕ್ಷಿತವಾಗಿ ಇದ್ದಾಳೆ’ ಎಂದು ಸೋನು ಗೌಡ ಹೇಳಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More