Madhu Bangarappa; ಕೇಂದ್ರ ಸರ್ಕಾರಕ್ಕೆ ತೆಗೆದುಕೊಳ್ಳೋದು ಮಾತ್ರ ಗೊತ್ತಿದೆ, ಕೊಡೋದು ಗೊತ್ತಿಲ್ಲ: ಮಧು ಬಂಗಾರಪ್ಪ, ಸಚಿವ

ಅರುಣ್​ ಕುಮಾರ್​ ಬೆಳ್ಳಿ

Updated on: Jun 20, 2023 | 4:37 PM

ರಾಜ್ಯ ಸರ್ಕಾರವೊಂದು ಜನಕಲ್ಯಾಣ ಯೋಜನೆ ಜಾರಿಮಾಡುವಾಗ ಫೆಡರಲ್ ಸಿಸ್ಟಮ್ ನಲ್ಲಿ ಕೇಂದ್ರ ಸರ್ಕಾರ ಕೈ ಜೋಡಿಸಬೇಕಾಗುತ್ತದೆ ಎಂದು ಸಚಿವ ಹೇಳಿದರು.

ಬೆಂಗಳೂರು: ಲೋಕ ಸಭೆಯಲ್ಲಿ ರಾಜ್ಯವನ್ನು ಪ್ರತಿನಿಧಿಸುವ ರಾಜ್ಯದ ಸಂಸದರನ್ನು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ತರಾಟೆಗೆ ತೆಗೆದುಕೊಂಡರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಚಿವರು, ಅನ್ನಭಾಗ್ಯ ಯೋಜನೆಯನ್ನು (Anna Bhagya Scheme) ಜಾರಿಗೊಳಿಸಲು ಅಗುತ್ತ್ತಿರುವ ತೊಡಕುಗಳ ಬಗ್ಗೆ ಟೀಕೆ ಟಿಪ್ಪಣಿ ಮಾಡುತ್ತಾ ಕೂರುವ ಬದಲು ಬಿಜೆಪಿ ಸಂಸದರು, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರೊಂದಿಗೆ ಮಾತಾಡಿ ಅಕ್ಕಿ ಪೂರೈಸುವಂತೆ ಯಾಕೆ ಒತ್ತಾಯಿಸಬಾರದು ಎಂದು ಕೇಳಿದರು. ಭಾರತದಲ್ಲಿ ಒಕ್ಕೂಟ ವ್ಯವಸ್ಥೆ ಜಾರಿಯಲ್ಲಿದೆ, ಹಾಗಾಗಿ ಕೊಡು ತೆಗೆದುಕೊಳ್ಳುವ ಪದ್ಧತಿಯ ಪಾಲನೆಯಾಗಬೇಕು, ಕೇಂದ್ರ ಸರ್ಕಾರಕ್ಕೆ ತೆಗೆದುಕೊಳ್ಳುವುದು ಮಾತ್ರ ಗೊತ್ತು, ರಾಜ್ಯದಿಂದ ಕೇಂದ್ರಕ್ಕೆ ಜಿಎಸ್ ಟಿ ಮೂಲಕ 4 ಲಕ್ಷ ಕೋಟಿ ರೂ. ಹೋಗುತ್ತದೆ ಆದರೆ ವಾಪಸ್ಸು ಸಿಗೋದು ಕೇವಲ 50,000-60,000 ಸಾವಿರ ಕೋಟಿ ರೂ. ಮಾತ್ರ ಎಂದು ಮಧು ಬಂಗಾರಪ್ಪ ಹೇಳಿದರು. ರಾಜ್ಯ ಸರ್ಕಾರವೊಂದು ಜನಕಲ್ಯಾಣ ಯೋಜನೆ ಜಾರಿಮಾಡುವಾಗ ಫೆಡರಲ್ ಸಿಸ್ಟಮ್ ನಲ್ಲಿ ಕೇಂದ್ರ ಸರ್ಕಾರ ಕೈ ಜೋಡಿಸಬೇಕಾಗುತ್ತದೆ ಎಂದು ಸಚಿವ ಹೇಳಿದರು.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.