ಕೊಡು ನನ್ ಮಾಮೂಲಿ 1000 ರೂ: ರಾಮನಗರ ಆರ್​ಟಿಒ ಕಚೇರಿಯಲ್ಲಿ ಲಂಚಕ್ಕೆ ಬೇಡಿಕೆ, ವಿಡಿಯೋ ವೈರಲ್

Edited By:

Updated on: Nov 05, 2025 | 12:33 PM

ರಾಮನಗರದ RTO ಕಚೇರಿಯಲ್ಲಿ ವಾಹನ ಲೊಕೇಶನ್ ಟ್ರ್ಯಾಕಿಂಗ್ ಡಿವೈಸ್ (VLTD) ಅನುಮೋದನೆಗೆ ಅಧಿಕಾರಿ ಕೃಷ್ಣೇಗೌಡರು ಲಂಚ ಕೇಳಿದ್ದಾರೆಂಬ ಆರೋಪ ಕೇಳಿಬಂದಿದೆ. ಹಣದ ಬೇಡಿಕೆ ಇಟ್ಟಿರುವ ವಿಡಿಯೋ ವೈರಲ್ ಆಗಿದ್ದು, ಪ್ರಾದೇಶಿಕ ಸಾರಿಗೆ ಅಧಿಕಾರಿಯ ನಡೆಯ ವಿರುದ್ಧ ಕನ್ನಡಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಮನಗರ, ನವೆಂಬರ್ 5: ರಾಮನಗರದ ಪ್ರಾದೇಶಿಕ ಸಾರಿಗೆ ಕಚೇರಿ (RTO) ಅಧಿಕಾರಿ ಕೃಷ್ಣೇಗೌಡರ ವಿರುದ್ಧ ಭಾರಿ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ವಾಹನ ಲೊಕೇಶನ್ ಟ್ರ್ಯಾಕಿಂಗ್ ಡಿವೈಸ್ (VLTD) ಅಳವಡಿಕೆಗೆ ಅನುಮೋದನೆಗಾಗಿ ಅಧಿಕಾರಿ ಲಂಚದ ಬೇಡಿಕೆ ಇಟ್ಟಿದ್ದಾರೆ ಎಂದು ದೂರಲಾಗಿದೆ. ವಾಹನ ಚಾಲಕರ ಬಳಿ ಸಾವಿರ ರೂಪಾಯಿ ಲಂಚ ಕೇಳಿದ ಆರೋಪದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕೃಷ್ಣೇಗೌಡರು VLTD ಅನುಮೋದನೆಗೆಂದು ಹಣ ಕೇಳಿದ್ದಾರೆ ಎಂದು ಚಾಲಕರು ಆರೋಪಿಸಿದ್ದಾರೆ. ಈ ಘಟನೆ ಬೆಳಕಿಗೆ ಬಂದ ನಂತರ, ಕನ್ನಡಪರ ಹೋರಾಟಗಾರರು RTO ಕೃಷ್ಣೇಗೌಡರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಕುರಿತು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Nov 05, 2025 12:32 PM
Follow Us
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More