‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!

Edited By:

Updated on: Mar 28, 2026 | 12:35 PM

ಬಾಗಲಕೋಟೆ ಉಪಚುನಾವಣಾ ಪ್ರಚಾರದ ಸಂದರ್ಭದಲ್ಲಿ ವಕ್ಫ್ ಸಚಿವ ಜಮೀರ್ ಅಹ್ಮದ್ ವಿರುದ್ಧ ಮುಸ್ಲಿಂ ಮುಖಂಡರು ಹಾಗೂ ಅಂಜುಮನ್ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದಂತೆ 9 ತಿಂಗಳಿಂದ ಅನುಮೋದನೆ ನೀಡದೆ ಸತಾಯಿಸಿದ್ದರಿಂದ ಜಮೀರ್ ಅಹ್ಮದ್ ಬಾಗಲಕೋಟೆ ಪ್ರಚಾರಕ್ಕೆ ಬರಬಾರದೆಂದು ‘ಗೋ ಬ್ಯಾಕ್’ ಅಭಿಯಾನ ನಡೆಸಿದ್ದಾರೆ.

ಬಾಗಲಕೋಟೆ, ಮಾರ್ಚ್​ 28: ಬಾಗಲಕೋಟೆ ಉಪಚುನಾವಣೆ (By election) ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದ್ದು, ರಾಜಕೀಯ ಪಕ್ಷಗಳು ತಮ್ಮದೇ ಆದ ತಂತ್ರಗಳನ್ನು ಅನುಸರಿಸುತ್ತಿವೆ. ಈ ಸಂದರ್ಭದಲ್ಲಿ, ರಾಜ್ಯದ ಪ್ರಮುಖ ಅಲ್ಪಸಂಖ್ಯಾತ ನಾಯಕರೆಂದು ಗುರುತಿಸಿಕೊಂಡಿರುವ ವಕ್ಫ್ ಸಚಿವ ಜಮೀರ್ ಅಹ್ಮದ್ ಅವರಿಗೆ ಬಾಗಲಕೋಟೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಇಲ್ಲಿನ ಅಂಜುಮನ್ ಸಮಿತಿಯ ಪದಾಧಿಕಾರಿಗಳು ಹಾಗೂ ಬೆಂಬಲಿಗರು ಜಮೀರ್ ಅಹ್ಮದ್ ಅವರು ಪ್ರಚಾರಕ್ಕೆ ಬರುವುದನ್ನು ವಿರೋಧಿಸಿ ‘ಗೋ ಬ್ಯಾಕ್ ಜಮೀರ್​ ಅಹ್ಮದ್’ ಅಭಿಯಾನ ನಡೆಸಿದ್ದಾರೆ.

ಈ ವಿರೋಧಕ್ಕೆ ಪ್ರಮುಖ ಕಾರಣ, ಅಂಜುಮನ್ ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದ ಬೆಳವಣಿಗೆಗಳು. ಹಿಂದೆ ಇದ್ದ ಅಧ್ಯಕ್ಷರನ್ನು ಅವಿಶ್ವಾಸ ಗೊತ್ತುವಳಿ ಮೂಲಕ ಬದಲಾಯಿಸಿ ಹೊಸ ಅಧ್ಯಕ್ಷರನ್ನು ನೇಮಕ ಮಾಡಲಾಗಿದ್ದು, ಅದರ ಅನುಮೋದನೆಗಾಗಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ ಕಳುಹಿಸಲಾಗಿತ್ತು. ಆದರೆ, ವಕ್ಫ್ ಸಚಿವರ ಇಲಾಖೆಯಿಂದ ಈ ಕೆಲಸಕ್ಕೆ ಒಂಬತ್ತು ತಿಂಗಳು ವಿಳಂಬವಾಗಿದೆ ಎಂದು ಆರೋಪಿಸಲಾಗಿದೆ. ಬಡ ಸಂಸ್ಥೆಯಾದ ಅಂಜುಮನ್‌ಗೆ ಅನ್ಯಾಯ ಮಾಡಲಾಗಿದೆ ಎಂಬುದು ಮುಸ್ಲಿಂ ಮುಖಂಡರ ಆರೋಪವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us