ಆಷಾಢಮಾಸದ ಮೂರನೇ ಶುಕ್ರವಾರ; ಚಾಮುಂಡಿ ತಾಯಿಗೆ ಬಗೆಬಗೆಯ ಹೂಗಳಿಂದ ಅಲಂಕಾರ

ಅರುಣ್​ ಕುಮಾರ್​ ಬೆಳ್ಳಿ

Updated on: Jul 11, 2025 | 10:31 AM

ಮೊದಲ ಶುಕ್ರವಾರ ಕಂಡ ನೂಕುನುಗ್ಗಲು ಈ ಶುಕ್ರವಾರ ಕಾಣುತ್ತಿಲ್ಲ. ಭಕ್ತರು ಸದ್ಯಕ್ಕಂತೂ ಯಾವುದೇ ದೂರು ಹೇಳುತ್ತಿಲ್ಲ. ಕಳೆದ ಶುಕ್ರವಾರ ಕೆಲ ಗಣ್ಯರು ದೇವಿಯ ದರ್ಶನಕ್ಕೆ ತಮ್ಮ ಕುಟುಂಬ ಹಾಗೂ ಬೆಂಬಲಿಗರೊಂದಿಗೆ ಬಂದಾಗ ಸರತಿ ಸಾಲಿನಲ್ಲಿದ್ದ ಭಕ್ತರು ಅಸಮಾಧಾನ ವ್ಯಕ್ತಪಡಿಸಿದ್ದರು. ಗಣ್ಯರ ಜೊತೆ ಸುಮಾರು 50-60 ಹಿಂಬಾಲಕರು ನುಗ್ಗಿದಾಗ ಬೆಳಗಿನ ಜಾವದಿಂದ ದರ್ಶನಕ್ಕೆ ನಿಂತವರಿಗೆ ಕೋಪ ಬರೋದು ಸಹಜವೇ.

ಮೈಸೂರು, ಜುಲೈ 11: ಇವತ್ತು ಆಷಾಢ ಮಾಸದ ಮೂರನೇ ಶುಕ್ರವಾರ, (third Friday of Aashaadha Maasa) ಚಾಮುಂಡಿ ಬೆಟ್ಟದಲ್ಲಿರುವ ನಾಡದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದು ಪುನೀತರಾಗಲು ಭಕ್ತಸಾಗರ ಬೆಳಗಿನ ಜಾವದಿಂದಲೇ ಲೈನುಗಟ್ಟಿದೆ. ದೇವಸ್ಥಾನದ ವ್ಯವಸ್ಥಾಪಕ ಮಂಡಳಿ ಮತ್ತು ಭಕ್ತಗಣ ಚಾಮುಂಡಿತಾಯಿಗೆ ಬಗೆಬಗೆಯ ಹೂಗಳಿಂದ ಗಜಲಕ್ಷ್ಮಿ ಮತ್ತು ಮಹಾಲಕ್ಷ್ಮಿ ಅಲಂಕಾರ ಮಾಡಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಕೇವಲ ಮೈಸೂರು ಮತ್ತು ಸುತ್ತಮುತ್ತಲ ಸ್ಥಳಗಳಿಂದ ಮಾತ್ರವಲ್ಲದೆ, ಬೇರೆ ಜಿಲ್ಲೆ ಮತ್ತು ರಾಜ್ಯಗಳಿಂದಲೂ ಭಕ್ತರು ತಂಡೋಪತಂಡವಾಗಿ ಅಗಮಿಸಿ ದೇವಿಯ ದರ್ಶನ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ:  Aashada Masa: ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನು ಮಾಡಬಾರದು ಎಂದು ಹೇಳುವುದೇಕೆ?

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.