ಗೋಲ್ಡ್ ಇಟ್ಟಿಲ್ಲ, ಲೋನ್ ಪಡೆದಿಲ್ಲ: ಮತ್ತೊಂದು ಕೆನರಾ ಬ್ಯಾಂಕಿನಿಂದ ಮಹಾ ಮೋಸ
ಬ್ಯಾಂಕ್ನಲ್ಲಿ ಅಡವಿಟ್ಟ ಚಿನ್ನದ ತೂಕದಲ್ಲಿ ವ್ಯತ್ಯಾಸ ಮಾಡಿ ಗ್ರಾಹಕರಿಗೆ ವಂಚಿಸುತ್ತಿದ್ದ ಪ್ರಕರಣವೊಂದು ಮೈಸೂರಿನ ಕೆನರಾ ಬ್ಯಾಂಕ್ನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಬ್ಯಾಂಕ್ನ ಅಧಿಕೃತ ಅಕ್ಕಸಾಲಿಗ (Appraiser) ಅಶ್ವಿನ್ ಆಚಾರ್ ಎಂಬುವವರ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನ ಮಲ್ಲೇಶ್ವರಂ 15ನೇ ಕ್ರಾಸ್ನ ಕೆನರಾ ಬ್ಯಾಂಕ್ನಲ್ಲಿ ಇಂತದ್ದೇ ಘಟನೆ ನಡೆದಿದೆ. ಹೌದು... ಬೆಂಗಳೂರಿನ ಮಲ್ಲೇಶ್ವರಂ 15ನೇ ಕ್ರಾಸ್ನ ಕೆನರಾ ಬ್ಯಾಂಕ್ನ ಹಿರಿಯ ವ್ಯವಸ್ಥಾಪಕ ಮ್ಯಾನೇಂಜರ್ ಎನ್.ರಘು ವಿರುದ್ಧ ವಿರುದ್ಧ 41 ಗ್ರಾಹಕರಿಗೆ ಮಕ್ಮಲ್ ಟೋಪಿ ಹಾಕಿ ಒಟ್ಟು 3.11 ಕೋಟಿಗೂ ಹೆಚ್ಚು ಹಣ ವಂಚಿಸಿರುವ ಆರೋಪ ಕೇಳಿಬಂದಿದ್ದು, ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮೈಸೂರು (ಡಿಸೆಂಬರ್ .29) : ಬ್ಯಾಂಕ್ನಲ್ಲಿ ಅಡವಿಟ್ಟ ಚಿನ್ನದ ತೂಕದಲ್ಲಿ ವ್ಯತ್ಯಾಸ ಮಾಡಿ ಗ್ರಾಹಕರಿಗೆ ವಂಚಿಸುತ್ತಿದ್ದ ಪ್ರಕರಣವೊಂದು ಮೈಸೂರಿನ ಕೆನರಾ ಬ್ಯಾಂಕ್ನಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಬ್ಯಾಂಕ್ನ ಅಧಿಕೃತ ಅಕ್ಕಸಾಲಿಗ (Appraiser) ಅಶ್ವಿನ್ ಆಚಾರ್ ಎಂಬುವವರ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರಿನ ಮಲ್ಲೇಶ್ವರಂ 15ನೇ ಕ್ರಾಸ್ನ ಕೆನರಾ ಬ್ಯಾಂಕ್ನಲ್ಲಿ ಇಂತದ್ದೇ ಘಟನೆ ನಡೆದಿದೆ. ಹೌದು… ಬೆಂಗಳೂರಿನ ಮಲ್ಲೇಶ್ವರಂ 15ನೇ ಕ್ರಾಸ್ನ ಕೆನರಾ ಬ್ಯಾಂಕ್ನ ಹಿರಿಯ ವ್ಯವಸ್ಥಾಪಕ ಮ್ಯಾನೇಂಜರ್ ಎನ್.ರಘು ವಿರುದ್ಧ ವಿರುದ್ಧ 41 ಗ್ರಾಹಕರಿಗೆ ಮಕ್ಮಲ್ ಟೋಪಿ ಹಾಕಿ ಒಟ್ಟು 3.11 ಕೋಟಿಗೂ ಹೆಚ್ಚು ಹಣ ವಂಚಿಸಿರುವ ಆರೋಪ ಕೇಳಿಬಂದಿದ್ದು, ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅಗಸ್ಟ್ 4 ರಿಂದ ಡಿ.9ರವರೆಗೆ ನಕಲಿ ಗೋಲ್ಡ್ ಲೋನ್ ಸೃಷ್ಟಿಸಿದ್ದ ರಘು, 41 ಗ್ರಾಹಕರ ಖಾತೆಗಳಲ್ಲಿ ನಕಲಿ ಗೋಲ್ಡ್ ಲೋನ್ ಮಾಡಿ ಹಣ ಪಡೆದು ಲೂಟಿ ಮಾಡಿದ್ದಾರೆ. ಬ್ಯಾಂಕ್ನ ಗ್ರಾಹಕರಾಗಿರುವ ವೃದ್ಧರು, ಪಿಂಚಣಿದಾರರು, ಆರ್ಚಕರು, ವ್ಯಾಪಾರಿಗಳನ್ನು ಗುರಿಯಾಗಿಸಿಕೊಂಡು ನಕಲಿ ಗೋಲ್ಡ್ ಲೋನ್ ಸೃಷ್ಟಿಸಿದ್ದು, ಇವರ ಖಾತೆಗಳ ಒಟಿಪಿ ಹಾಗೂ ಚೆಕ್ ಪಡೆದು ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇದೀಗ ಮ್ಯಾನೇಜರ್ ರಘು ಎಸ್ಕೇಪ್ ಆಗಿದ್ದು, ಇತ್ತ 41 ಖಾತೆಗಳನ್ನ ಬ್ಯಾಂಕ್ ಫ್ರೀಜ್ ಮಾಡಿದ್ದರಿಂದ ಗ್ರಾಹಕರು ಪರದಾಡುವಂತಾಗಿದೆ. ಇನ್ನು ಈ ಬಗ್ಗೆ ಗ್ರಾಹಕರೊಬ್ಬರು ಟಿವಿ9 ಜತೆ ಮಾತನಾಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ: ಎದೆ ಝಲ್ ಎನಿಸೋ ದೃಶ್ಯ!
ಬಾರ್ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!

