ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ

Updated on: Jan 04, 2025 | 8:35 PM

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 11 ರಿಂದ ಕೌಟುಂಬಿಕ ಕಾರಣಗಳಿಂದಾಗಿ ಹೊರಗೆ ಹೋದ ಗೋಲ್ಡ್ ಸುರೇಶ್ ಅವರು, ಮನೆಯಲ್ಲಿದ್ದಾಗ, ಧನರಾಜ್​ಗೆ ಪ್ರಾಮಿಸ್ ಮಾಡಿದ್ದರಂತೆ. ಅವರ ಮಗಳಿಗೆ ತೊಟ್ಟಿಲು ಉಡುಗೊರೆ ಕೊಡುವುದಾಗಿ. ಇದೀಗ ಮನೆಯಿಂದ ಹೊರಗೆ ಬಂದ ಮೇಲೆ ಧನರಾಜ್ ಮನೆಗೆ ಭೇಟಿ ನೀಡಿರುವ ಸುರೇಶ್ ತೊಟ್ಟಿಲು ಉಡುಗೊರೆ ನೀಡಿದ್ದಾರೆ.

ಬಿಗ್​ಬಾಸ್ ಕನ್ನಡ ಸೀಸನ್ 11 ಯಶಸ್ವಿಯಾಗಿ ಚಾಲ್ತಿಯಲ್ಲಿದೆ. ಕೆಲವರು ಅಚ್ಚರಿಯ ಪ್ರದರ್ಶನ ಹೆಚ್ಚು ವಾರಗಳ ಕಾಲ ಉಳಿದುಕೊಂಡಿದ್ದಾರೆ. ಅವರಲ್ಲಿ ಧನರಾಜ್ ಸಹ ಒಬ್ಬರು. ಧನರಾಜ್, ಬಿಗ್​ಬಾಸ್​ಗೆ ಬಂದ ಆರಂಭದಲ್ಲಿ ಇವರು ಬೇಗನೆ ಎಲಿಮಿನೇಟ್ ಆಗುತ್ತಾರೆ ಎಂದು ಬಹಳ ಮಂದಿ ಅಂದುಕೊಂಡಿದ್ದರು, ಆದರೆ ಎಲ್ಲರೊಡನೆ ಸ್ನೇಹ ಉಳಿಸಿಕೊಂಡು ಧನರಾಜ್ ಹಲವು ವಾರಗಳ ಕಾಲ ಉಳಿದುಕೊಂಡು ಬಂದಿದ್ದಾರೆ. ಬಿಗ್​ಬಾಸ್ ಮನೆಯಿಂದ ಅನಿವಾರ್ಯ ಕಾರಣದಿಂದ ಹೊರಗೆ ಹೋದ ಸುರೇಶ್ ಅವರೊಟ್ಟಿಗೆ ಧನರಾಜ್​ಗೆ ಒಳ್ಳೆಯ ಗೆಳೆತನ ಇತ್ತು. ಮನೆಯಲ್ಲಿದ್ದಾಗ, ಧನರಾಜ್ ಮಗಳಿಗೆ ತೊಟ್ಟಿಲು ಉಡುಗೊರೆ ಕೊಡುವುದಾಗಿ ಸುರೇಶ್ ಹೇಳಿದ್ದರು. ಇದೀಗ ಬಿಗ್​ಬಾಸ್ ಮನೆಯಿಂದ ಹೊರಗೆ ಹೋಗಿರುವ ಸುರೇಶ್, ಧನರಾಜ್ ಮನೆಗೆ ಭೇಟಿ ನೀಡಿ ಮಗಳಿಗೆ ಉಡುಗೊರೆ ಕೊಟ್ಟಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jan 04, 2025 08:34 PM
Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More