ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಗೊತ್ತಾ? ಸಂಶೋಧಕ ಅಪ್ಪಣ್ಣ ಏನು ಹೇಳುತ್ತಾರೆ ನೋಡಿ

Edited By:

Updated on: Jan 12, 2026 | 11:55 AM

ಐತಿಹಾಸಿಕ ಹಿನ್ನೆಲೆಯ ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಪತ್ತೆಯಾದ ಚಿನ್ನದ ನಿಧಿಯ ಬಗ್ಗೆ ಸಂಶೋಧಕ ಅಪ್ಪಣ್ಣ ಹಂಜೆ ಮಹತ್ವದ ಮಾಹಿತಿ ನೀಡಿದ್ದು, ಈ ಚಿನ್ನಾಭರಣಗಳು ಸುಮಾರು 11 ಅಥವಾ 12ನೇ ಶತಮಾನಕ್ಕೆ ಸಂಬಂಧಿಸಿವೆ ಎಂದು ಹೇಳಿದ್ದಾರೆ. ಲಕ್ಕುಂಡಿಯಲ್ಲಿ ದೊರೆತ ಈ ಅಭರಣಗಳ ಸ್ವರೂಪವನ್ನು ಪರಿಶೀಲಿಸಿದಾಗ, ಅವು ಅರಸು ಮನೆತನ ಅಥವಾ ಉನ್ನತ ವರ್ಗಕ್ಕೆ ಸೇರಿದವುಗಳಾಗಿರದೆ, ಸಾಮಾನ್ಯ ಕುಟುಂಬದ ವ್ಯಕ್ತಿಯೊಬ್ಬರು ಸುರಕ್ಷತೆಗಾಗಿ ಸಂರಕ್ಷಿಸಿಟ್ಟಿದ್ದಾಗಿ ಕಂಡುಬರುತ್ತದೆ. ಲಕ್ಕುಂಡಿಯ ಹಿಂದಿನ ಸಮೃದ್ಧ ಇತಿಹಾಸ, ಅಲ್ಲಿ ಸಿಕ್ಕಿರುವ 150ಕ್ಕೂ ಹೆಚ್ಚು ಶಾಸನಗಳು, ದೇವಾಲಯಗಳು ಹಾಗೂ ಪುರಾತತ್ವ ಅವಶೇಷಗಳು ಈ ಪ್ರದೇಶದ ಶ್ರೀಮಂತಿಕೆಗೆ ಸಾಕ್ಷಿಯಾಗಿವೆ. ಈ ನಿಧಿ ಆ ಪ್ರಾಚೀನ ಕಾಲದ ಜೀವನಶೈಲಿ ಮತ್ತು ಆರ್ಥಿಕ ಸ್ಥಿತಿಗತಿಯ ಬಗ್ಗೆ ಮತ್ತಷ್ಟು ಬೆಳಕು ಚೆಲ್ಲಲಿದೆ ಎಂದು ಸಂಶೋಧಕ ತಿಳಿಸಿದ್ದಾರೆ.

ಗದಗ, ಜನವರಿ 11:  ಐತಿಹಾಸಿಕ ಹಿನ್ನೆಲೆಯ ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ಪತ್ತೆಯಾದ ಚಿನ್ನದ ನಿಧಿಯ ಬಗ್ಗೆ ಸಂಶೋಧಕ ಅಪ್ಪಣ್ಣ ಹಂಜೆ ಮಹತ್ವದ ಮಾಹಿತಿ ನೀಡಿದ್ದು, ಈ ಚಿನ್ನಾಭರಣಗಳು ಸುಮಾರು 11 ಅಥವಾ 12ನೇ ಶತಮಾನಕ್ಕೆ ಸಂಬಂಧಿಸಿವೆ ಎಂದು ಹೇಳಿದ್ದಾರೆ. ಲಕ್ಕುಂಡಿಯಲ್ಲಿ ದೊರೆತ ಈ ಅಭರಣಗಳ ಸ್ವರೂಪವನ್ನು ಪರಿಶೀಲಿಸಿದಾಗ, ಅವು ಅರಸು ಮನೆತನ ಅಥವಾ ಉನ್ನತ ವರ್ಗಕ್ಕೆ ಸೇರಿದವುಗಳಾಗಿರದೆ, ಸಾಮಾನ್ಯ ಕುಟುಂಬದ ವ್ಯಕ್ತಿಯೊಬ್ಬರು ಸುರಕ್ಷತೆಗಾಗಿ ಸಂರಕ್ಷಿಸಿಟ್ಟಿದ್ದಾಗಿ ಕಂಡುಬರುತ್ತದೆ. ಲಕ್ಕುಂಡಿಯ ಹಿಂದಿನ ಸಮೃದ್ಧ ಇತಿಹಾಸ, ಅಲ್ಲಿ ಸಿಕ್ಕಿರುವ 150ಕ್ಕೂ ಹೆಚ್ಚು ಶಾಸನಗಳು, ದೇವಾಲಯಗಳು ಹಾಗೂ ಪುರಾತತ್ವ ಅವಶೇಷಗಳು ಈ ಪ್ರದೇಶದ ಶ್ರೀಮಂತಿಕೆಗೆ ಸಾಕ್ಷಿಯಾಗಿವೆ. ಈ ನಿಧಿ ಆ ಪ್ರಾಚೀನ ಕಾಲದ ಜೀವನಶೈಲಿ ಮತ್ತು ಆರ್ಥಿಕ ಸ್ಥಿತಿಗತಿಯ ಬಗ್ಗೆ ಮತ್ತಷ್ಟು ಬೆಳಕು ಚೆಲ್ಲಲಿದೆ ಎಂದು ಸಂಶೋಧಕ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Published on: Jan 11, 2026 01:18 PM
Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More