ಗತವೈಭವ: ಹೊಸ ಹೀರೋ ಸಿನಿಮಾಗೆ ಬೆಂಬಲ ನೀಡಿದ ಗೋಲ್ಡನ್ ಸ್ಟಾರ್ ಗಣೇಶ್

Updated on: Nov 14, 2025 | 9:23 PM

ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರು ಹೊಸ ಹುಡುಗರ ಬೆನ್ನು ತಟ್ಟುತ್ತಾರೆ. ಈಗ ಅವರು ‘ಗತವೈಭವ’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಈ ಸಿನಿಮಾದಲ್ಲಿ ಹೊಸ ನಟ ದುಷ್ಯಂತ್ ಅವರು ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಖ್ಯಾತ ನಿರ್ದೇಶಕ ಸಿಂಪಲ್ ಸುನಿ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ.

ನಟ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಅವರು ಹೊಸ ಹುಡುಗರ ಬೆನ್ನು ತಟ್ಟುತ್ತಾರೆ. ಈಗ ಅವರು ‘ಗತವೈಭವ’ (Gatha Vaibhava) ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಈ ಸಿನಿಮಾದಲ್ಲಿ ಹೊಸ ನಟ ದುಷ್ಯಂತ್ (Dushyanth) ಅವರು ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಖ್ಯಾತ ನಿರ್ದೇಶಕ ಸಿಂಪಲ್ ಸುನಿ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ. ನವೆಂಬರ್ 14ರಂದು ಬಿಡುಗಡೆ ಆಗಿರುವ ಈ ಚಿತ್ರದಲ್ಲಿ ಆಶಿಕಾ ರಂಗನಾಥ್ ಅವರು ಅಭಿನಯಿಸಿದ್ದಾರೆ. ‘ಗತವೈಭವದ ಸೀನ್ ನಂಬರ್ 1ರಿಂದ ಕ್ಲೈಮ್ಯಾಕ್ಸ್ ತನಕ ನನಗೆ ಚೆನ್ನಾಗಿ ಗೊತ್ತು. ಸುನಿ ಇರುವ ರೀತಿಯೇ ಸ್ಕ್ರಿಪ್ಟ್ ಕೂಡ ಅಷ್ಟೇ ಚೆನ್ನಾಗಿ ಇರುತ್ತದೆ. ಈ ಸಿನಿಮಾದ ಶೋ ರೀಲ್ ನೋಡಿದಾಗ ತುಂಬಾ ಅದ್ದೂರಿಯಾಗಿ ಮಾಡಿದ್ದಾರೆ ಅಂತ ನನಗೆ ಗೊತ್ತಾಯಿತು. ಹೊಸ ಹೀರೋ ದುಷ್ಯಂತ್ ಅವರು ತುಂಬಾ ಚೆನ್ನಾಗಿ ಕಾಣಿಸುತ್ತಿದ್ದಾರೆ. ಛಾಯಾಗ್ರಹಣ ಬಹಳ ಚೆನ್ನಾಗಿದೆ. ಸುನಿ ಮತ್ತು ಅವರ ಇಡೀ ತಂಡಕ್ಕೆ ನನ್ನ ಕಡೆಯಿಂದ ಆಲ್​ ದಿ ಬೆಸ್ಟ್’ ಎಂದು ಗಣೇಶ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Nov 14, 2025 09:23 PM
Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More