ಗತವೈಭವ: ಹೊಸ ಹೀರೋ ಸಿನಿಮಾಗೆ ಬೆಂಬಲ ನೀಡಿದ ಗೋಲ್ಡನ್ ಸ್ಟಾರ್ ಗಣೇಶ್

Updated on: Nov 14, 2025 | 9:23 PM

ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರು ಹೊಸ ಹುಡುಗರ ಬೆನ್ನು ತಟ್ಟುತ್ತಾರೆ. ಈಗ ಅವರು ‘ಗತವೈಭವ’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಈ ಸಿನಿಮಾದಲ್ಲಿ ಹೊಸ ನಟ ದುಷ್ಯಂತ್ ಅವರು ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಖ್ಯಾತ ನಿರ್ದೇಶಕ ಸಿಂಪಲ್ ಸುನಿ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ.

ನಟ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ಅವರು ಹೊಸ ಹುಡುಗರ ಬೆನ್ನು ತಟ್ಟುತ್ತಾರೆ. ಈಗ ಅವರು ‘ಗತವೈಭವ’ (Gatha Vaibhava) ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಈ ಸಿನಿಮಾದಲ್ಲಿ ಹೊಸ ನಟ ದುಷ್ಯಂತ್ (Dushyanth) ಅವರು ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ಖ್ಯಾತ ನಿರ್ದೇಶಕ ಸಿಂಪಲ್ ಸುನಿ ಅವರು ಆ್ಯಕ್ಷನ್-ಕಟ್ ಹೇಳಿದ್ದಾರೆ. ನವೆಂಬರ್ 14ರಂದು ಬಿಡುಗಡೆ ಆಗಿರುವ ಈ ಚಿತ್ರದಲ್ಲಿ ಆಶಿಕಾ ರಂಗನಾಥ್ ಅವರು ಅಭಿನಯಿಸಿದ್ದಾರೆ. ‘ಗತವೈಭವದ ಸೀನ್ ನಂಬರ್ 1ರಿಂದ ಕ್ಲೈಮ್ಯಾಕ್ಸ್ ತನಕ ನನಗೆ ಚೆನ್ನಾಗಿ ಗೊತ್ತು. ಸುನಿ ಇರುವ ರೀತಿಯೇ ಸ್ಕ್ರಿಪ್ಟ್ ಕೂಡ ಅಷ್ಟೇ ಚೆನ್ನಾಗಿ ಇರುತ್ತದೆ. ಈ ಸಿನಿಮಾದ ಶೋ ರೀಲ್ ನೋಡಿದಾಗ ತುಂಬಾ ಅದ್ದೂರಿಯಾಗಿ ಮಾಡಿದ್ದಾರೆ ಅಂತ ನನಗೆ ಗೊತ್ತಾಯಿತು. ಹೊಸ ಹೀರೋ ದುಷ್ಯಂತ್ ಅವರು ತುಂಬಾ ಚೆನ್ನಾಗಿ ಕಾಣಿಸುತ್ತಿದ್ದಾರೆ. ಛಾಯಾಗ್ರಹಣ ಬಹಳ ಚೆನ್ನಾಗಿದೆ. ಸುನಿ ಮತ್ತು ಅವರ ಇಡೀ ತಂಡಕ್ಕೆ ನನ್ನ ಕಡೆಯಿಂದ ಆಲ್​ ದಿ ಬೆಸ್ಟ್’ ಎಂದು ಗಣೇಶ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Nov 14, 2025 09:23 PM