ತುಮಕೂರು: ಬಾಣಂತಿ ಊರಿನಿಂದ ಹೊರಗೆ, ಗೊಲ್ಲರಹಟ್ಟಿಯಲ್ಲಿ ಮೌಢ್ಯಾಚರಣೆ

ಮಹೇಶ್ ಇ, ಭೂಮನಹಳ್ಳಿ Edited By: Rakesh Nayak Manchi

Updated on: Jul 18, 2023 | 3:26 PM

ತುಮಕೂರು ಜಿಲ್ಲೆಯ ಗೊಲ್ಲರಹಟ್ಟಿಯಲ್ಲಿ ಮೌಢ್ಯಾಚರಣೆ ಇನ್ನೂ ಜೀವಂತವಾಗಿದೆ. ಗೊಲ್ಲ ಸಮುದಾಯವು ಹೆರಿಗೆ ನಂತರ ಬಾಣಂತಿಯನ್ನು ಗ್ರಾಮದಿಂದ ಹೊರಗಿಟ್ಟ ಘಟನೆ ನಡೆದಿದೆ.

ತುಮಕೂರು, ಜುಲೈ 18: ಜಿಲ್ಲೆಯ ಗೊಲ್ಲರಹಟ್ಟಿಯಲ್ಲಿ (Gollarahatti) ಮೌಢ್ಯಾಚರಣೆ ಇನ್ನೂ ಜೀವಂತವಾಗಿದೆ. ಗೊಲ್ಲ ಸಮುದಾಯವು (Golla Community) ಹೆರಿಗೆ ನಂತರ ಬಾಣಂತಿಯನ್ನು ಗ್ರಾಮದಿಂದ ಹೊರಗಿಟ್ಟ ಘಟನೆ ನಡೆದಿದೆ. ಐದು ದಿನಗಳ ಹಿಂದೆ ಜಿಲ್ಲಾಸ್ಪತ್ರೆಯಲ್ಲಿ ವಸಂತ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ಹೆರಿಗೆ ಸಂದರ್ಭದಲ್ಲಿ ಗಂಡು‌ ಮಗು ಸಾವನ್ನಪ್ಪಿದ್ದು, ನವಜಾತ ಹೆಣ್ಣು ಮಗು ತಾಯಿ ಮಾಡಿಲಿನಲ್ಲಿದೆ. ಆದರೆ ಮೌಢ್ಯಾಚರಣೆ ನಡೆಸುತ್ತಿರುವ ಗೊಲ್ಲ ಸಮುದಾಯದ ಜನರು, ಎರಡು ತಿಂಗಳ ಕಾಲ ಬಾಣಂತಿಯನ್ನು ಊರಿನಿಂದ ಹೊರಗಿಟ್ಟಿದ್ದಾರೆ. ಗುಡಿಸಲು ಮಾಡಿ ಅದರಲ್ಲಿ ಬಾಣಂತಿ ಮತ್ತು ಮಗುವನ್ನು ಇರಿಸಿದ್ದಾರೆ. ನಮ್ಮ ದೇವರಿಗೆ ಸೂತಕ ಆಗಲ್ಲ, ಹಾಗಾಗಿ ನಾವು ಒಳಗೆ ಬಿಟ್ಟುಕೊಳ್ಳುವುದಿಲ್ಲ ಎಂದು ಗೊಲ್ಲ ಸಮುದಾಯದವರು ಹೇಳುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...