Karnataka Bandh: ಕರ್ನಾಟಕ ಬಂದ್ ಗೆ ಉತ್ತಮ ಬೆಂಬಲ, ಬಿಎಂಟಿಸಿ ಬಸ್ ನಿಲ್ದಾಣದಿಂದ ಕದಲದ ವಾಹನಗಳು, ಜನರ ಪರದಾಟ

ಅರುಣ್​ ಕುಮಾರ್​ ಬೆಳ್ಳಿ

Updated on: Sep 29, 2023 | 10:24 AM

ವರದಿಗಾರರು ಹೇಳುವ ಪ್ರಕಾರ ನಿರ್ದಿಷ್ಟ ಸ್ಥಳದ ಕಡೆ ಹೋಗುವ ಜನರನ್ನು ಅಧಿಕಾರಿಗಳು ಒಂದುಗೂಡಿಸಿ ಕಳಿಸುವ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ಬಂದ್ ಬಗ್ಗೆ ಗೊತ್ತಿರದ ಇಬ್ಬರು ಯುವತಿಯರು ಬಂದು ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಸಿಲುಕಿದ್ದಾರೆ. ಅವರಿಗೆ ಕೋರಮಂಗಲ ಕಡೆ ಹೋಗಬೇಕಂತೆ. ಅವರನ್ನು ಅಧಿಕಾರಿಗಳು ಹೇಗೆ ತಲುಪಿಸುತ್ತಾರೋ?

ಬೆಂಗಳೂರು: ಕಾವೇರಿ ಜಲ ವಿವಾದದ (Cauvery water issue) ಹಿನ್ನೆಲೆ ವಿವಿಧ ಕನ್ನಡ ಪರ ಸಂಘಟನೆಗಳು ನೀಡಿರುವ ಅಖಂಡ ಕರ್ನಾಟಕ ಬಂದ್ (Karnataka Bandh) ನಿರೀಕ್ಷೆಗೂ ಮೀರಿದ ಬೆಂಬಲ ಸಿಗುತ್ತಿದೆ. ನಗರದ ಮೆಜೆಸ್ಟಿಕ್ ಪ್ರದೇಶದಲ್ಲಿರುವ ಬಿಎಮ್ ಟಿಸಿ ಬಸ್ ನಿಲ್ದಾಣದಲ್ಲಿನ (BMTC bus terminal) ಪ್ರತ್ಯಕ್ಷ ಚಿತ್ರಣವನ್ನು ಟಿವಿ9 ಕನ್ನಡ ವಾಹಿನಿಯ ವರದಿಗಾರ ನೀಡಿದ್ದಾರೆ. ಬಸ್ ಸಂಚಾರ ಎಂದಿನಂತಿರುತ್ತದೆ ಅಂತ ನಿನ್ನೆ ಸರ್ಕಾರದ ಪ್ರತಿನಿಧಿಗಳು ಹೇಳಿದ್ದರೂ ವಾಸ್ತವಾಂಶ ಭಿನ್ನವಾಗಿದೆ. ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಗಳ ಜೊತೆ ಪ್ರಯಾಣಿಕರ ಸಂಖ್ಯೆಯೂ ವಿರಳವಾಗಿದೆ. ಬಸ್ ಗಳು ನಿಲ್ದಾಣದಿಂದ ಕದಲುತ್ತಿಲ್ಲ. ಅಲ್ಲೊಂದಿಲ್ಲೊಂದು ಬಸ್ ಅನ್ನು ಕಳಿಸುವ ವ್ಯವಸ್ಥೆ ನಗರ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಮಾಡುತ್ತಿದ್ದಾರೆ. ವರದಿಗಾರರು ಹೇಳುವ ಪ್ರಕಾರ ನಿರ್ದಿಷ್ಟ ಸ್ಥಳದ ಕಡೆ ಹೋಗುವ ಜನರನ್ನು ಅಧಿಕಾರಿಗಳು ಒಂದುಗೂಡಿಸಿ ಕಳಿಸುವ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ಬಂದ್ ಬಗ್ಗೆ ಗೊತ್ತಿರದ ಇಬ್ಬರು ಯುವತಿಯರು ಬಂದು ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಸಿಲುಕಿದ್ದಾರೆ. ಅವರಿಗೆ ಕೋರಮಂಗಲ ಕಡೆ ಹೋಗಬೇಕಂತೆ. ಅವರನ್ನು ಅಧಿಕಾರಿಗಳು ಹೇಗೆ ತಲುಪಿಸುತ್ತಾರೋ?

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.