ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಗೋರಿಪಾಳ್ಯದ ಇಂದಿರಾ ಕ್ಯಾಂಟೀನ್ ನಿರ್ವಹಣೆ ಇಲ್ಲದೆ ಪಾಳು ಬಿದ್ದಿದೆ. ಕಳಪೆ ಸ್ಥಿತಿಯಲ್ಲಿರುವ ಇದು ಅನೈತಿಕ ಚಟುವಟಿಕೆಗಳಿಗೆ ಬಳಕೆಯಾಗುತ್ತಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಡ್ರಗ್ಸ್ ಚಟುವಟಿಕೆಗಳಿಗೂ ಬಳಕೆಯಾಗುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಅಧಿಕಾರಿಗಳು ಕೂಡಲೇ ಗಮನಹರಿಸಿ, ಬಡವರಿಗೆ ಅನುಕೂಲವಾಗುವಂತೆ ಕ್ಯಾಂಟೀನ್ ಪುನರಾರಂಭಿಸಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.
ಬೆಂಗಳೂರು, ಫೆಬ್ರವರಿ 21: ಬೆಂಗಳೂರಿನ ಗೋರಿಪಾಳ್ಯದಲ್ಲಿರುವ ಇಂದಿರಾ ಕ್ಯಾಂಟೀನ್ ನಿರ್ವಹಣೆಯ ಕೊರತೆಯಿಂದ ಪಾಳು ಬಿದ್ದಿದೆ. ಬಡವರ ಅಕ್ಷಯ ಪಾತ್ರೆ ಎಂದೇ ಕರೆಯಲ್ಪಡುತ್ತಿದ್ದ ಈ ಕ್ಯಾಂಟೀನ್ ಪ್ರಸ್ತುತ ದಯನೀಯ ಸ್ಥಿತಿಯಲ್ಲಿದೆ. ಕಳೆದ ಎರಡು-ಮೂರು ತಿಂಗಳಿಂದ ಕ್ಯಾಂಟೀನ್ ಮುಚ್ಚಲ್ಪಟ್ಟಿದೆ. ಸ್ಥಳೀಯರ ಪ್ರಕಾರ, ಕ್ಯಾಂಟೀನ್ ಆವರಣವನ್ನು ಈಗ ಗಾಂಜಾ ಮತ್ತು ಇತರೆ ಅನೈತಿಕ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ. ಸದ್ಯ ಸ್ಥಳೀಯರು ಆಕ್ರೋಶಗೊಂಡಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಧ್ವನಿ ಎತ್ತಿದ್ದಾರೆ. ಹಿಂದೆ ಬಡವರು ಇಲ್ಲಿ ನೆಮ್ಮದಿಯಿಂದ ಊಟ ಮಾಡುತ್ತಿದ್ದರು. ಆದರೆ ಈಗ ಕ್ಯಾಂಟೀನ್ ಸುತ್ತಮುತ್ತ ಕಸ ಮತ್ತು ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ. ಅಧಿಕಾರಿಗಳು, ಕಾರ್ಪೊರೇಟರ್ಗಳು ಈ ಬಗ್ಗೆ ಗಮನಹರಿಸಿ, ಕ್ಯಾಂಟೀನ್ ಅನ್ನು ಸ್ವಚ್ಛಗೊಳಿಸಿ, ಪುನಃ ತೆರೆಯಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ವರದಿ: ಅರುಣ್ ಕುಮಾರ್, ಟಿವಿ9 ಬೆಂಗಳೂರು
Loading...
Unable to load recommendations.
Follow Us
