ಕರಾವಳಿ ಪ್ರಾಂತ್ಯದ ಜನ ವಲಸೆ ಹೋಗುವುದನ್ನು ತಡೆಗಟ್ಟಲು ಸರ್ಕಾರ ಬದ್ಧವಾಗಿದೆ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Nov 22, 2024 | 10:18 AM

ಸರ್ಕಾರದ ಉಳಿವಿನ ಬಗ್ಗೆ ಬೇಸರದಲ್ಲಿ ಮಾತಾಡಿ ಕಾಂಗ್ರೆಸ್ ಕಚೇರಿಗಳನ್ನು ಬೇಗ ಕಟ್ಟಿಕೊಳ್ಳುವಂತೆ ಕಾರ್ಯಕರ್ತರಿಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ, ಗಾಂದೀಜಿಯವರು ಕಾಂಗ್ರೆಸ್ ನಾಯಕತ್ವವಹಿಸಿ ನೂರು ವರ್ಷ ಆಗಿರುವ ಹಿನ್ನೆಲೆಯಲ್ಲಿ ನೂರು ಕಾಂಗ್ರೆಸ್ ಕಚೇರಿಗಳನ್ನು ಕಟ್ಟುವ ಜವಾಬ್ದಾರಿಯನ್ನು ಕಾರ್ಯಕರ್ತರಿಗೆ ವಹಿಸಲಾಗಿದೆ ಎಂದು ಶಿವಕುಮಾರ್ ಹೇಳಿದರು.

ಕಾರವಾರ: ತಮ್ಮ ಸರ್ಕಾರ ಕರಾವಳಿ ಪ್ರಾಂತ್ಯದ ಜನರ ಅಭ್ಯುದಯಕ್ಕೆ ಬದ್ಧವಾಗಿದೆ, ಜನ ಗುಳೆ ಹೋಗುವುದನ್ನು ತಡೆಗಟ್ಟಲು ಸರ್ಕಾರದಿಂದ ಎಲ್ಲ ಪ್ರಯತ್ನ ನಡೆದಿವೆ, ಈ ಭಾಗದ ಜನ ವಿದ್ಯಾವಂತರು ಮತ್ತು ಬುದ್ಧಿವಂತರು, ಬದುಕು ಕಟ್ಟಿಕೊಳ್ಳಲು ಅವರಿಗೆ ಇಲ್ಲೇ ಬೇಕಾದಷ್ಟು ಅವಕಾಶಗಳಿವೆ, ಪ್ರಾಕೃತಿಕ ಸಂಪತ್ತಿದೆ ಮತ್ತು ಸರ್ಕಾರ ಕರಾವಳಿ ಪ್ರಾಂತ್ಯಕ್ಕೆಂದೇ ಹೊಸ ಪ್ರವಾಸೋದ್ಯಮ ನೀತಿಯನ್ನು ರೂಪಿಸಿದೆ, ಹಾಗಾಗಿ ಕರಾವಳಿ ಜನ ಆತಂಕಪಡುವ ಅವಶ್ಯಕತೆಯಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಕೊಲ್ಲೂರು ಮೂಕಾಂಬಿಕಾ ದರ್ಶನಕ್ಕಾಗಿ ಬೈಂದೂರಿಗೆ ಹೆಲಿಕಾಪ್ಟರ್​ನಲ್ಲಿ ಆಗಮಿಸಿದ ಡಿಕೆ ಶಿವಕುಮಾರ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.