AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಪ್ಪಳ ಮಾಡುವವರೂ ತೆರಿಗೆ ಪಾವತಿದಾರರು ಅಂತ ಬಿಪಿಎಲ್ ಕಾರ್ಡ್ ರದ್ದು ಮಾಡಿರುವ ಸರ್ಕಾರ!

ಹಪ್ಪಳ ಮಾಡುವವರೂ ತೆರಿಗೆ ಪಾವತಿದಾರರು ಅಂತ ಬಿಪಿಎಲ್ ಕಾರ್ಡ್ ರದ್ದು ಮಾಡಿರುವ ಸರ್ಕಾರ!

ಅರುಣ್​ ಕುಮಾರ್​ ಬೆಳ್ಳಿ
|

Updated on: Nov 20, 2024 | 1:24 PM

Share

ನಗರದ ಮಹಾಲಕ್ಷ್ಮಿ ಲೇಔಟ್​ನ ವೃಷಭಾವತಿ ನಗರದಲ್ಲಿ ವಾಸವಾಗಿರುವ ಈ ಕುಟುಂಬ ಉಪ ಜೀವನಕ್ಕಾಗಿ ಹಪ್ಪಳ ಮಾಡುತ್ತದೆ. ಆದರೆ ಟ್ಯಾಕ್ಸ್ ಪಾವತಿಸುತ್ತಾರೆ ಅಂತ ಅವರ ಕಾರ್ಡ್ ರದ್ದು ಮಾಡಲಾಗಿದೆ. ಬಿಪಿಎಲ್ ಕಾರ್ಡ್​ನಿಂದ ಅವರಿಗೆ ಸಿಗುತ್ತಿದ್ದ ಅಕ್ಕಿ ಮತ್ತು ವೈದ್ಯಕೀಯ ಸೌಲಭ್ಯ ಈಗ ಅಲಭ್ಯವಾಗಿವೆ. ಕ್ಷೇತ್ರದ ಬಿಜೆಪಿ ಶಾಸಕ ಗೋಪಾಲಯ್ಯ ತಮಗೆ ನೆರವಾಗುವ ನಿರೀಕ್ಷೆಯನ್ನು ಕುಟುಂಬ ಇಟ್ಟುಕೊಂಡಿದೆ.

ಬೆಂಗಳೂರು: ಗ್ಯಾರಂಟಿ ಯೋಜನೆ ಫಲಾನಭವಿಗಳ ಬಿಪಿಎಲ್ ಕಾರ್ಡ್ ಪರಿಷ್ಕರಣೆಯ ಕೆಲಸವನ್ನು ಸರ್ಕಾರ ಭರದಿಂದ ನಡೆಸಿದ್ದು, ಜಿಎಸ್​ಟಿ ಮತ್ತು ಆದಾಯ ತೆರಿಗೆ ಕಟ್ಟುತ್ತಿರುವವರ ಬಿಪಿಎಲ್ ಕಾರ್ಡ್​ಗಳನ್ನು ರದ್ದು ಮಾಡಿ ಅವರಿಗೆ ಎಪಿಎಲ್ ಕಾರ್ಡ್​ಗಳನ್ನು ನೀಡಲಾಗುತ್ತಿದೆ. ಆದರೆ ಈ ಕೆಲಸ ಸರಿಯಾಗಿ ಅಗುತ್ತಿಲ್ಲ, ಬಡವರ, ದಿನಗೂಲಿ ಮಾಡುವ ಮತ್ತು ಹಪ್ಪಳ ಮಾಡಿ ಬದುಕು ನಡೆಸುವ ಕುಟುಂಬಗಳು ಆದಾಯ ತೆರಿಗೆ ಪಾವತಿಸುತ್ತಿವೆ ಅಂತ ಅವರ ಬಿಪಿಎಲ್ ಕಾರ್ಡ್​ಗಳನ್ನು ಸರ್ಕಾರ ರದ್ದು ಮಾಡಿದೆ. ನಗರದ ಅಂಥ ಕೆಲ ಕುಟುಂಬಗಳೊಂದಿಗೆ ನಮ್ಮ ಬೆಂಗಳೂರು ವರದಿಗಾರ ಮಾತಾಡಿದ್ದಾರೆ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬಡ ಚಾಲಕನ ಕುಟುಂಬದ ಬಿಪಿಎಲ್ ಕಾರ್ಡ್ ರದ್ದು: ಪತ್ನಿಗೆ ಬ್ರೈನ್ ಟ್ಯೂಮರ್, ದುಡ್ಡಿಲ್ಲದೆ ಪರದಾಡುತ್ತಿರುವವರ ಮೇಲೆ ಪ್ರಹಾರ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More