ಶೈಕ್ಷಣಿಕ ಪ್ರವಾಸದ ವೇಳೆ ಬಸ್ ಚಲಾಯಿಸಿದ ಶಿಕ್ಷಕ: ವಿಡಿಯೋ ವೈರಲ್ ಆದ ಬೆನ್ನಲ್ಲೇ ಅಮಾನತು

Edited By:

Updated on: Feb 04, 2025 | 2:33 PM

ಶಾಲಾ ಶಿಕ್ಷಕರೊಬ್ಬರು ಶೈಕ್ಷಣಿಕ ಪ್ರವಾಸದ ವೇಳೆ ಮೋಜಿಗಾಗಿ ಬಸ್ ಚಾಲನೆ ಮಾಡಿದ್ದು ಇದೀಗ ಅವರ ವೃತ್ತಿಗೇ ಕಂಟಕವಾಗಿ ಪರಿಣಮಿಸಿದೆ. ಚಾಮರಾಜನಗರ ಜಿಲ್ಲೆಯ ಶಾಲಾ ಶಿಕ್ಷಕ ಪ್ರಮಾದ ಎಸಗಿದ್ದು, ಸದ್ಯ ಅವರನ್ನು ಅಮಾನತು ಮಾಡಲಾಗಿದೆ. ಅವರು ಬಸ್ ಚಾಲನೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ.

ಚಾಮರಾಜನಗರ, ಫೆಬ್ರವರಿ 4: ಶೈಕ್ಷಣಿಕ ಪ್ರವಾಸದ ವೇಳೆ ಬಸ್ ಚಲಾಯಿಸಿದ ಗುಂಬಳ್ಳಿ ಸರ್ಕಾರಿ ಪ್ರೌಢಶಾಲಾ ಶಿಕ್ಷಕ ವೀರಭದ್ರಸ್ವಾಮಿ ಅವರನ್ನು ಅಮಾನತು ಮಾಡಲಾಗಿದೆ. ಚಾಲಕನ ಬದಲು ಶಿಕ್ಷಕ ವೀರಭದ್ರಸ್ವಾಮಿ ತಾವೇ ಬಸ್ ಚಲಾಯಿಸಿದ್ದರು. ಶಾಲಾ ಶಿಕ್ಷಕ ಬಸ್ ಚಲಾಯಿಸುವ ವಿಡಿಯೋ ವೈರಲ್ ಆಗಿತ್ತು. ಸಾರ್ವಜನಿಕರ ದೂರಿನ ಮೇರೆಗೆ ಸೇವಾ ನಡತೆ ಉಲ್ಲಂಘನೆ ಆರೋಪದಡಿ ವೀರಭದ್ರಸ್ವಾಮಿ ಅವರನ್ನು ಅಮಾನತುಗೊಳಿಸಿ ಡಿಡಿಪಿಐ ರಾಮಚಂದ್ರರಾಜೇ ಅರಸ್ ಆದೇಶ ಹೊರಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Feb 04, 2025 01:56 PM
Follow Us
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More