ದೆಹಲಿಯಲ್ಲಿ ಸಿಜೆಪಿ ವಕ್ತಾರರ ಜೊತೆ ಕೇಂದ್ರ ಸರ್ಕಾರದ 3ನೇ ಸುತ್ತಿನ ಮಾತುಕತೆ

Updated on: Jul 25, 2026 | 5:23 PM

ನೀಟ್ (NEET) ಪೇಪರ್ ಲೀಕ್ ವಿವಾದ, ಪರೀಕ್ಷಾ ಅಕ್ರಮಗಳು ಮತ್ತು ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳ ಕುರಿತು ಸರ್ಕಾರದ ಪ್ರತಿನಿಧಿಗಳು ಹಾಗೂ ಪ್ರತಿಭಟನಾನಿರತ ಸಿಜೆಪಿ ನಾಯಕರ ನಡುವೆ ಈ ಸಭೆ ಏರ್ಪಟ್ಟಿದೆ. ಕೇಂದ್ರ ಸರ್ಕಾರದ ಪರವಾಗಿ ಸಚಿವರಾದ ಜೆ.ಪಿ ನಡ್ಡಾ ಮತ್ತು ಜಿತೇಂದ್ರ ಸಿಂಗ್ ಹಾಜರಾಗಿದ್ದರೆ ಸಿಜೆಪಿ ಪರವಾಗಿ ರಾಷ್ಟ್ರೀಯ ವಕ್ತಾರರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಭಾಗಿಯಾಗಿದ್ದಾರೆ. ಈಗಾಗಲೇ ಧರ್ಮೇಂದ್ರ ಪ್ರಧಾನ್ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಸಿಜೆಪಿ ತನ್ನ ಪ್ರತಿಭಟನೆಯನ್ನು ನಿಲ್ಲಿಸುತ್ತದೆಯೇ ಅಥವಾ ಮುಂದುವರೆಸುತ್ತದೆಯೇ ಎಂಬುದು ಈ ಸಭೆಯ ಬಳಿಕ ಬಹಿರಂಗವಾಗುವ ಸಾಧ್ಯತೆಯಿದೆ.

ನವದೆಹಲಿ, ಜುಲೈ 25: ದೆಹಲಿಯ ಕಾನ್‌ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಕೇಂದ್ರ ಸರ್ಕಾರ ಮತ್ತು ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಿಯೋಗದ ನಡುವೆ 3ನೇ ಸುತ್ತಿನ ಸಭೆ ನಡೆಯುತ್ತಿದೆ. ನೀಟ್ (NEET) ಪೇಪರ್ ಲೀಕ್ ವಿವಾದ, ಪರೀಕ್ಷಾ ಅಕ್ರಮಗಳು ಮತ್ತು ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳ ಕುರಿತು ಸರ್ಕಾರದ ಪ್ರತಿನಿಧಿಗಳು ಹಾಗೂ ಪ್ರತಿಭಟನಾನಿರತ ಸಿಜೆಪಿ ನಾಯಕರ ನಡುವೆ ಈ ಸಭೆ ಏರ್ಪಟ್ಟಿದೆ. ಕೇಂದ್ರ ಸರ್ಕಾರದ ಪರವಾಗಿ ಸಚಿವರಾದ ಜೆ.ಪಿ ನಡ್ಡಾ ಮತ್ತು ಜಿತೇಂದ್ರ ಸಿಂಗ್ ಹಾಜರಾಗಿದ್ದರೆ ಸಿಜೆಪಿ ಪರವಾಗಿ ರಾಷ್ಟ್ರೀಯ ವಕ್ತಾರರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಭಾಗಿಯಾಗಿದ್ದಾರೆ. ಈಗಾಗಲೇ ಧರ್ಮೇಂದ್ರ ಪ್ರಧಾನ್ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಸಿಜೆಪಿ ತನ್ನ ಪ್ರತಿಭಟನೆಯನ್ನು ನಿಲ್ಲಿಸುತ್ತದೆಯೇ ಅಥವಾ ಮುಂದುವರೆಸುತ್ತದೆಯೇ ಎಂಬುದು ಈ ಸಭೆಯ ಬಳಿಕ ಬಹಿರಂಗವಾಗುವ ಸಾಧ್ಯತೆಯಿದೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jul 25, 2026 05:22 PM
Loading...
Unable to load recommendations.
Follow Us