ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?

Edited By:

Updated on: Jun 13, 2026 | 7:33 PM

ಜಿಲ್ಲೆಯ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಸಿ) ನೀಲಕಂಠ ಅಂಗಡಿ ಅವರ ಮೇಲೆ ರೈತ ಬಸಪ್ಪ ದೊಡ್ಡಮನಿ ಚಪ್ಪಲಿಯಿಂದ ಹಲ್ಲೆ ನಡೆಸಿದ ಘಟನೆ ಆತಂಕ ಮೂಡಿಸಿದೆ. ಪರಿಹಾರ ಹಣದ ವಿಳಂಬ ಹಾಗೂ ತಾರತಮ್ಯ ಆರೋಪದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ.

ಬಾಗಲಕೋಟೆ, ಜೂನ್ 13: ಜಿಲ್ಲೆಯ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಸಿ) ನೀಲಕಂಠ ಅಂಗಡಿ ಅವರ ಮೇಲೆ ರೈತ ಬಸಪ್ಪ ದೊಡ್ಡಮನಿ ಚಪ್ಪಲಿಯಿಂದ ಹಲ್ಲೆ ನಡೆಸಿದ ಘಟನೆ ಆತಂಕ ಮೂಡಿಸಿದೆ. ಪರಿಹಾರ ಹಣದ ವಿಳಂಬ ಹಾಗೂ ತಾರತಮ್ಯ ಆರೋಪದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆ.

ಘಟನೆ ಕುರಿತು ಟಿವಿ9ಗೆ ಮಾಹಿತಿ ನೀಡಿದ ನೀಲಕಂಠ ಅಂಗಡಿ, ಘಟನೆ ಸುಮಾರು 12 ಗಂಟೆಗೆ ನಡೆದಿದೆ. ಹಕ್ಕುಪತ್ರ ಮತ್ತು ಇ-ಖಾತೆ ವಿತರಣಾ ಕಾರ್ಯಕ್ರಮ ನಡೆಯುತ್ತಿತ್ತು. ಬಸಪ್ಪ ದೊಡ್ಡಮನಿ ತಮ್ಮ ಫೈಲ್ ಬಗ್ಗೆ ವಿಚಾರಿಸಲು ಬಂದರು. ತನ್ನ ಕಡತ ತನ್ನ ಬಳಿ ಇಲ್ಲ, ಆರ್‌ಒ ಕಚೇರಿಯಲ್ಲಿದೆ ಎಂದು ಹೇಳಿದಾಗ ಆವಾಚ್ಯ ಶಬ್ದಗಳಿಂದ ನಿಂದಿಸಿ, ಕುತ್ತಿಗೆ ಹಿಡಿದು ಚಪ್ಪಲಿಯಿಂದ ಹೊಡೆದರು ಎಂದು ವಿವರಿಸಿದ್ದಾರೆ. ಅಧ್ಯಕ್ಷರ ಚೇಂಬರ್‌ಗೆ ಹೋಗಿ ವಿಷಯ ತಿಳಿಸಿದಾಗ, ಅಲ್ಲಿಯೂ ಬಸಪ್ಪ ಬಂದು ಅಧ್ಯಕ್ಷರ ಮುಂದೆಯೇ ಮತ್ತೆ ಹಲ್ಲೆ ನಡೆಸಿದ್ದಾರೆ ಎಂದು ನೀಲಕಂಠ ಅಂಗಡಿ ತಿಳಿಸಿದ್ದಾರೆ.

ಈ ಘಟನೆಯಿಂದ ಅಧಿಕಾರಿಗಳ ವಲಯದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದ್ದು, ತಮ್ಮ ಭದ್ರತೆ ಬಗ್ಗೆ ಸಿಬ್ಬಂದಿ ಕಳವಳ ವ್ಯಕ್ತಪಡಿಸಿದ್ದಾರೆ. ಹಲ್ಲೆಕೋರನ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಮತ್ತು ಕರ್ತವ್ಯನಿರತ ಸಿಬ್ಬಂದಿಗೆ ನ್ಯಾಯ ಒದಗಿಸಬೇಕು ಎಂದು ನೀಲಕಂಠ ಅಂಗಡಿ ಮತ್ತು ಇತರೆ ಸಿಬ್ಬಂದಿ ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರವಿ ಹೆಚ್ ಮೂಕಿ, ಕಲಘಟಗಿ

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More