ಸರ್ಕಾರದ ಯಾವುದೇ ಬೆದರಿಕೆಗೆ ಮಣಿಯಲ್ಲ, ಹೋರಾಟ ಮುಂದುವರಿಯುತ್ತದೆ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ

ಅರುಣ್​ ಕುಮಾರ್​ ಬೆಳ್ಳಿ

Updated on: Dec 10, 2024 | 8:36 PM

ಬಂಧನಕ್ಕೊಳಗಾಗಿರುವ ಪಂಚಮಸಾಲಿ ಸಮುದಾಯದವರನ್ನು 24 ಗಂಟೆಯೊಳಗೆ ಬಿಡುಗಡೆ ಮಾಡಬೇಕು, ಲಾಠಿಚಾರ್ಜ್ ಗೆ ಕಾರಣರಾದ ಪೊಲೀಸ್ ಕಮೀಶನರ್ ಮತ್ತು ಎಡಿಜಿಪಿಯನ್ನು ಕೂಡಲೇ ಸಸ್ಪೆಂಡ್ ಮಾಡಬೇಕು ಎಂದು ಹೇಳಿದ ಸಾಮೀಜಿಯವರು ಸರ್ಕಾರ ಇದನ್ನು ಮಾಡದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದರು. ಗಾಯಗೊಂಡಿರುವ ಪ್ರತಿಭಟನಾಕಾರರು ಆತಂಕ ಪಡಬೇಕಿಲ್ಲ, ಅವರ ಚಿಕಿತ್ಸೆಯ ವೆಚ್ಚವನ್ನು ತಮ್ಮ ಕೈಲಾದಷ್ಟು ಮಟ್ಟಿಗೆ ಭರಿಸಲಾಗುವುದು ಎಂದು ಸ್ವಾಮೀಜಿ ಹೇಳಿದರು.

ಬೆಳಗಾವಿ: ಚೆನ್ನಮ್ಮ ವೃತ್ತದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರಯ ಸಿದ್ದರಾಮಯ್ಯ ಸರ್ಕಾರ ಪ್ರಾಯಶಃ ಪ್ರತಿಭಟನೆಕಾರರ ಮೇಲೆ ಗುಂಡು ಹಾರಿಸಲು ಸಹ ಹಿಂಜರಿಯದ ಮನಸ್ಥಿಯಲ್ಲಿತ್ತು ಎಂದು ಹೇಳಿದರು. ತಮ್ಮನ್ನು ಭೇಟಿಯಾಗಲು ಮುಖ್ಯಮಂತ್ರಿ ಹೇಳಿ ಕಳಿಸಿದ ಕಾರಣ ಅಲ್ಲಿಗೆ ಹೋಗುವಾಗ ಲಾಠಿಚಾರ್ಜ್ ಮಾಡಲಾಗಿದೆ, ಅವರೇನೇ ಮಾಡಿದರೂ ತಮ್ಮ ಹೋರಾಟ ನಿಲ್ಲಲ್ಲ, ಪ್ರತಿಭಟನೆಯ ಮುಂದುವರಿದ ಭಾಗವಾಗಿ ಡಿಸೆಂಬರ್ 12 ರಂದು ಪಂಚಮಸಾಲಿ ಸಮುದಾಯದವರು ತಾವಿರುವ ಹಳ್ಳಿ, ಹೋಬಳಿ, ತಾಲ್ಲೂಕು ಮತ್ತು ಜಿಲ್ಲಾಕೇಂದ್ರಗಳಲ್ಲಿ ರಾಸ್ತಾರೋಕೋ ಮಾಡುತ್ತಾರೆ, ಹೋರಾಟದ ಮುಂದಿನ ಹಂತವನ್ನು ಅವತ್ತು ಪ್ರಕಟಿಸಲಾಗುವುದು ಎಂದು ಸ್ವಾಮೀಜಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  2ಎ ಪ್ರವರ್ಗಕ್ಕೆ ಲಿಂಗಾಯತ ಪಂಚಮಸಾಲಿ ಸಮುದಾಯ ಸೇಪರ್ಡಿಸುವ ನಂಬಿಕೆ ಇದೆ: ಬಸವ ಜಯ ಮೃತ್ಯುಂಜಯ ಸ್ವಾಮಿ

Published on: Dec 10, 2024 08:31 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.