ಸರ್ಕಾರಿ ನೌಕರರು ಸರ್ಕಾರದ ಭಾಗ, 7ನೇ ವೇತನಾ ಆಯೋಗದ ಶಿಫಾರಸ್ಸುಗಳನ್ನು ಅವರೊಂದಿಗೆ ಚರ್ಚಿಸುತ್ತೇವೆ: ಬಸವರಾಜ ಬೊಮ್ಮಾಯಿ

Updated on: Feb 21, 2023 | 5:54 PM

7ನೇ ವೇತನಾ ಆಯೋಗದ ಬಗ್ಗೆ ಮಾತಾಡಿದ ಮುಖ್ಯಮಂತ್ರಿಗಳು ಸರ್ಕಾರೀ ನೌಕರರನ್ನು ನಾವು ಸರ್ಕಾರದ ಭಾಗವೆಂದು ಪರಿಗಣಿಸುತ್ತೇವೆ, ಅವರೊಂದಿಗೆ ಚರ್ಚಿಸಿ ಆಯೋಗದ ಶಿಫಾರಸ್ಸುಗಳನ್ನು ಪರಾಮರ್ಶಿಸಲಾಗುವುದು ಎಂದರು.

ಹಾಸನ: ಜಿಲ್ಲ್ಲೆಯ ಐತಿಹಾಸಿಕ ಪ್ರವಾಸಿ ತಾಣವಾಗಿರುವ ಬೇಲೂರಲ್ಲಿ (Belur) ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಹಾಗೂ ಇತರ ನಾಯಕರೊಂದಿಗೆ ಚೆನ್ನಕೇಶವ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಬೇಲೂರು ಮತ್ತು ಹಳೆಬೀಡು ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಿ ಅವುಗಳನ್ನು ವಿಶ್ವವಿಖ್ಯಾತ ಪ್ರವಾಸಿ ತಾಣಗಳಾಗಿ ಪರಿವರ್ತಿಸಲಾಗುವುದು ಎಂದು ಹೇಳಿದರು. ಇದೇ ಸಂದರ್ಭದಲ್ಲಿ 7ನೇ ವೇತನಾ ಆಯೋಗದ ಬಗ್ಗೆ ಮಾತಾಡಿದ ಮುಖ್ಯಮಂತ್ರಿಗಳು ಸರ್ಕಾರೀ ನೌಕರರನ್ನು ನಾವು ಸರ್ಕಾರದ ಭಾಗವೆಂದು ಪರಿಗಣಿಸುತ್ತೇವೆ, ಅವರೊಂದಿಗೆ ಚರ್ಚಿಸಿ ಆಯೋಗದ ಶಿಫಾರಸ್ಸುಗಳನ್ನು ಪರಾಮರ್ಶಿಸಲಾಗುವುದು ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 21, 2023 05:54 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More