ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ ಎಂದ ಸತೀಶ್ ಜಾರಕಿಹೊಳಿ

Edited By:

Updated on: Jul 12, 2026 | 10:06 PM

ಸಚಿವ ಸತೀಶ್ ಜಾರಕಿಹೋಳಿ ಚಿಕ್ಕೋಡಿಗೆ ಭೇಟಿ ನೀಡಿ ಮಳೆ ಹಾನಿ ಪ್ರದೇಶಗಳನ್ನು ವೀಕ್ಷಿಸಿದರು. ನಿರೀಕ್ಷೆಗಿಂತ ಕಡಿಮೆ ಮಳೆಯಾಗಿದ್ದರೂ, ಬೆಳೆ ಹಾನಿ ಕುರಿತು ಸಮೀಕ್ಷೆ ನಡೆಸಲಾಗುವುದು ಎಂದು ತಿಳಿಸಿದರು. ಮುಖ್ಯಮಂತ್ರಿಗಳ ಭೇಟಿ, ಬಿ.ಕೆ. ಹರಿಪ್ರಸಾದ್ ಅವರ ಹೇಳಿಕೆ ಪ್ರತಿಕ್ರಿಯಿಸಿದರು. ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು.

ಬೆಳಗಾವಿ, ಜುಲೈ 12: ಮಳೆಯಿಂದಾಗಿ ಬೆಳೆ ಹಾನಿಯಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ, ಪರಿಸ್ಥಿತಿಯನ್ನು ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೋಳಿ, ‘ಬೆಳೆ ಹಾನಿಯ ಕುರಿತು ಸಮೀಕ್ಷೆ ನಡೆಸಲಾಗುವುದು. ಮಳೆ ನಿರೀಕ್ಷೆಗಿಂತ ಕಡಿಮೆಯಾಗಿದ್ದರೂ, ಕುಡಿಯುವ ನೀರಿನ ಸಮಸ್ಯೆ ಪರಿಹಾರವಾಗಿದೆ ಹಾಗೂ ಬಹುತೇಕ ಡ್ಯಾಂಗಳು ತುಂಬಿವೆ. ಆದಾಗ್ಯೂ, ಹಲವೆಡೆ ಬೆಳೆಗಳಿಗೆ ಹಾನಿಯಾಗಿದೆ. ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ. ಮುಖ್ಯಮಂತ್ರಿಗಳು ಈ ಕುರಿತು ಸಮೀಕ್ಷೆ ನಡೆಸುವಂತೆ ಸೂಚಿಸಿದ್ದು, ಸರ್ಕಾರ ನಿರ್ಧಾರ ಕೈಗೊಳ್ಳಲಿದೆ’ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us