Bengaluru Bandh; ರ‍್ಯಾಲಿ ನಡೆಸಿದರೆ ಬಂಧಿಸುವ ಸರ್ಕಾರದ ಎಚ್ಚರಿಕೆಗೆ ಹೆದರಲ್ಲ: ಕುರುಬೂರು ಶಾಂತಕುಮಾರ್, ರೈತ ನಾಯಕ

ಅರುಣ್​ ಕುಮಾರ್​ ಬೆಳ್ಳಿ

Updated on: Sep 26, 2023 | 10:39 AM

Bengaluru Bandh; ಇವತ್ತಿನ ಹೋರಾಟದ ರೂಪುರೇಷೆಗಳನ್ನು ವಿವರಿಸಿದ ಶಾಂತಕುಮಾರ್ ನಗರದ ಟೌನ್ ಹಾಲ್ ಬಳಿ ಎಲ್ಲ ಸಂಘಟನೆಗಳ ಸದಸ್ಯರು ಸೇರಿ ಅಲ್ಲಿಂದ ಒಟ್ಟಾಗಿ ಫ್ರೀಡಂ ಪಾರ್ಕ್​ಗೆ ಹೋಗಿ ಸರ್ಕಾರಕ್ಕೆ ಒತ್ತಾಯ ಪತ್ರ ಸಲ್ಲಿಸಲಾಗುವುದು ಎಂದರು. ಕನ್ನಡ ಪರ ಸಂಘಟನೆಗಳು ಇವತ್ತಿನ ಬಂದ್ ಗೆ ಬೆಂಬಲ ನೀಡದಿರೋದು ಪ್ರತಿಭಟನೆಯ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ಅವರು ಹೇಳಿದರು.

ಬೆಂಗಳೂರು: ಕಾವೇರಿ ನದಿ ನೀರಿನ ಹಂಚಿಕೆ ಸಂಬಂಧಿಸಿದತೆ ಸರ್ಕಾರದ ವೈಫಲ್ಯವನ್ನು ವಿರೋಧಿಸಿ ರೈತ ಸಂಘಟನೆಗಳು (farmer organisations) ಕರೆದಿರುವ ಬೆಂಗಳೂರು ಬಂದ್ ಗೆ (Bengaluru Bandh) ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ. ಏತನ್ಮಧ್ಯೆ, ಬಂದ್ ವೇಳೆ ರ‍್ಯಾಲಿಗಳನ್ನು ನಡೆಸಿದರೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ನೀಡಿರುವ ಎಚ್ಚರಿಕೆ ವಿಷಯದಲ್ಲಿ ಟಿವಿ9 ಕನ್ನಡ ವಾಹಿನಿಯ ಬೆಂಗಳೂರು ವರದಿಗಾರನೊಂದಿಗೆ ಮಾತಾಡಿದ ರೈತ ನಾಯಕ ಕುರುಬೂರು ಶಾಂತಕುಮಾರ್ (Kuruburu Shanthakumar), ಸರ್ಕಾರದ ಎಚ್ಚರಿಕೆಗೆ ಜಗ್ಗಲ್ಲ, ಬಗ್ಗಲ್ಲ ಎಂದು ಹೇಳಿದರು. ಕಳೆದ ವರ್ಷ ಕೊರೋನಾ ಪಿಡುಗು ಸಂದರ್ಭದಲ್ಲಿ ಲಾಕ್ ಡೌನ್ ಘೋಷಿಸಿ ಕಟ್ಟ್ಟುನಿಟ್ಟಿನ ಕ್ರಮಗಳು ಜಾರಿಯಲ್ಲಿದ್ದಾಗ ಡಿಕೆ ಶಿವಕುಮಾರ್ (DK Shivakumar) ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ಆಯೋಜಿಸಿದ್ದರು. ಅವರನ್ನು ಆಗ ಬಂಧಿಸಲಾಗಿತ್ತೇ ಎಂದು ಕೇಳಿದ ಶಾಂತಕುಮಾರ್, ಜೈಲಿಗೆ ಹೋಗಬೇಕಾದ ಸ್ಥಿತಿ ಎದರಾದರೂ ಹೆದರಲ್ಲ ಅಂತ ಹೇಳಿದರು. ಇವತ್ತಿನ ಹೋರಾಟದ ರೂಪುರೇಷೆಗಳನ್ನು ವಿವರಿಸಿದ ಅವರು ನಗರದ ಟೌನ್ ಹಾಲ್ ಬಳಿ ಎಲ್ಲ ಸಂಘಟನೆಗಳ ಸದಸ್ಯರು ಸೇರಿ ಅಲ್ಲಿಂದ ಒಟ್ಟಾಗಿ ಫ್ರೀಡಂ ಪಾರ್ಕ್ಗೆ ಹೋಗಿ ಸರ್ಕಾರಕ್ಕೆ ಒತ್ತಾಯ ಪತ್ರ ಸಲ್ಲಿಸಲಾಗುವುದು ಎಂದರು. ಕನ್ನಡ ಪರ ಸಂಘಟನೆಗಳು ಇವತ್ತಿನ ಬಂದ್ ಗೆ ಬೆಂಬಲ ನೀಡದಿರೋದು ಪ್ರತಿಭಟನೆಯ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ಶಾಂತಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.