ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ: ಡಿಕೆಶಿ ಮಹತ್ವದ ಘೋಷಣೆ

Updated on: Sep 18, 2026 | 6:53 PM

ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಹೆಸರು ಬದಲಾವಣೆ ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಈ ಸಂಬಂಧ ಇಂದಿನ ಸಚಿವ ಸಂಪುಟದಲ್ಲಿ ಚರ್ಚೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಹೆಸರು ಬದಲಾವಣೆ ಮಾಡಲು ಮುಂದೆ ಯಾವುದೇ ತಂಟೆ ತಕರಾರು ಬರಬಾರದು ಎಂದು ಜನರ ಅಭಿಪ್ರಾಯ ಸಂಗ್ರಹಿಸಲು ಒಂದು ತಿಂಗಳ ಸಮಯ ಕೊಟ್ಟಿದೆ. ಇನ್ನು ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಡಿಕೆ ಶಿವಕುಮಾರ್, ಜಿಲ್ಲೆಗೆ ಮಂಗಳೂರು ಹೆಸರಿಡುವ ಬಗ್ಗೆ ಚರ್ಚೆ ಮಾಡಿದ್ದೇವೆ. ದಕ್ಷಿಣ ಕನ್ನಡ ಜಿಲ್ಲೆಯನ್ನ ಮಂಗಳೂರು ಜಿಲ್ಲೆಯಾಗಿ ಘೋಷಿಸುವ ಬಗ್ಗೆ ಚರ್ಚೆ ಮಾಡಿದ್ದೇವೆ. ಆದರೆ ಜನರ ಅಭಿಪ್ರಾಯ ಸಂಗ್ರಹಿಸಲು ಒಂದು ತಿಂಗಳ ಅವಕಾಶ ನೀಡುತ್ತೇವೆ ಎಂದರು.

ಮಂಗಳೂರು, ಸೆಪ್ಟೆಂಬರ್ 18): ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಹೆಸರು ಬದಲಾವಣೆ ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಈ ಸಂಬಂಧ ಇಂದಿನ ಸಚಿವ ಸಂಪುಟದಲ್ಲಿ ಚರ್ಚೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಹೆಸರು ಬದಲಾವಣೆ ಮಾಡಲು ಮುಂದೆ ಯಾವುದೇ ತಂಟೆ ತಕರಾರು ಬರಬಾರದು ಎಂದು ಜನರ ಅಭಿಪ್ರಾಯ ಸಂಗ್ರಹಿಸಲು ಒಂದು ತಿಂಗಳ ಸಮಯ ಕೊಟ್ಟಿದೆ. ಇನ್ನು ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಡಿಕೆ ಶಿವಕುಮಾರ್, ಜಿಲ್ಲೆಗೆ ಮಂಗಳೂರು ಹೆಸರಿಡುವ ಬಗ್ಗೆ ಚರ್ಚೆ ಮಾಡಿದ್ದೇವೆ. ದಕ್ಷಿಣ ಕನ್ನಡ ಜಿಲ್ಲೆಯನ್ನ ಮಂಗಳೂರು ಜಿಲ್ಲೆಯಾಗಿ ಘೋಷಿಸುವ ಬಗ್ಗೆ ಚರ್ಚೆ ಮಾಡಿದ್ದೇವೆ. ಆದರೆ ಜನರ ಅಭಿಪ್ರಾಯ ಸಂಗ್ರಹಿಸಲು ಒಂದು ತಿಂಗಳ ಅವಕಾಶ ನೀಡುತ್ತೇವೆ ಎಂದರು.

ಒಂದು ಪದ್ಧತಿ ಮೇಲೆ ಕೆಲಸ ಮಾಡಬೇಕಾಗುತ್ತದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಂಗಳೂರು ಹೆಸರು ಮಾಡಿದೆ. ದಕ್ಷಿಣ ಕನ್ನಡ ಹೆಸರು ಈ ಹಿಂದೆ ಯಾವಾಗ ಹೇಗೆ ಬಂತು ಚರ್ಚೆ ಮಾಡಲ್ಲ. ಒಂದು ತಿಂಗಳೊಳಗೆ ಮಂಗಳೂರು ಜಿಲ್ಲೆ ಎಂದು ಬದಲಾಯಿಸುವ ಬಗ್ಗೆ ನಿರ್ಧಾರ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಕ್ಲಿಕ್ ಮಾಡಿ

Published on: Sep 18, 2026 06:52 PM
Loading...
Unable to load recommendations.
Follow Us