ಮಾಲ್ಡೀವ್ಸ್ ಅಧ್ಯಕ್ಷ ಮೊಹ್ಮದ್ ಮೊಯಿಝು ಗೌರವಾರ್ಥ ಔತಣಕೂಟಕ್ಕೆ ಸಿಎಂರನ್ನು ಆಹ್ವಾನಿಸಿದ ರಾಜ್ಯಪಾಲರು

Updated on: Oct 09, 2024 | 4:54 PM

ಅಧ್ಯಕ್ಷ ಮೊಹ್ಮದ್ ಮೊಯಿಝು ಅವರನ್ನು ಬೀಳ್ಕೊಟ್ಟ ನಂತರ ಸಿದ್ದರಾಮಯ್ಯರನ್ನು ಕಳಿಸಲು ಮುಖ್ಯಮಂತ್ರಿಯವರ ಕಾರಿನವರೆಗೆ ಬಂದ ರಾಜ್ಯಪಾಲರು ಬಹಳ ಆತ್ಮೀಯ ಮತ್ತು ಅಹ್ಲಾದಕರ ರೀತಿಯಲ್ಲಿ ಮಾತಾಡಿದರು. ಮುಖ್ಯಮಂತ್ರಿಯವರೊಂದಿಗೆ ಸಚಿವ ಡಾ ಎಂಸಿ ಸುಧಾಕರ್ ನಿಂತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು.

ಬೆಂಗಳೂರು: ನಗರಕ್ಕೆ ಬೇಟಿ ನೀಡಿರುವ ಮಾಲ್ಡೀವ್ಸ್ ಅಧ್ಯಕ್ಷ ಮೊಹ್ಮದ್ ಮೊಯಿಝು ಅವರ ಗೌರವಾರ್ಥ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಜಭವನದಲ್ಲಿ ಏರ್ಪಡಿಸಿದ್ದ ಔತಣಕೂಟದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಆಹ್ವಾನಿತರಾಗಿದ್ದರು. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮತ್ತು ರಾಜ್ಯಪಾಲರ ನಡುವಿನ ಸಂಬಂಧ ಎಂದಿನಂತಿಲ್ಲದಿದ್ದರೂ ಇಬ್ಬರು ಗಣ್ಯರು ಎಲ್ಲವನ್ನು ಮರೆತು ಆತ್ಮೀಯತೆಯಿಂದ ವ್ಯವಹರಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಒತ್ತಡ ಹಾಕಿದ್ದ ಕಾಂಗ್ರೆಸ್ ನಾಯಕರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿರುಗೇಟು

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More