ಸಚಿವ ಸುರೇಶ್ ಮಗನ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಜೊತೆಯಾಗಿ ಊಟ ಮಾಡಿದ ರಾಜ್ಯಪಾಲರು ಮತ್ತು ಡಿಸಿಎಂ!

ಅರುಣ್​ ಕುಮಾರ್​ ಬೆಳ್ಳಿ Edited By:

Updated on: Aug 28, 2024 | 3:21 PM

ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಮತ್ತು ಉಪ ಮುಖ್ಯಮಂತ್ರಿಯಲ್ಲದೆ ಸಚಿವ ಡಾ ಎಂಸಿ ಸುಧಾಕರ್, ಶಾಸಕರಾದ ಶರತ್ ಬಚ್ಚೇಗೌಡ, ಎಸ್ ಆರ್ ವಿಶ್ವನಾಥ್ ಮೊದಲಾದವರು ಭಾಗಿಯಾಗಿದ್ದರು.

ಬೆಂಗಳೂರು: ರಾಜ್ಯಪಾಲರ ಕಚೇರಿ ಮತ್ತು ಕರ್ನಾಟಕ ಸರ್ಕಾರದ ನಡುವೆ ಒಂದು ತಿಂಗಳಕ್ಕಿಂತ ಹೆಚ್ಚಿನ ಅವಧಿಯಿಂದ ನಡುವೆ ನಡೆಯುತ್ತಿರುವ ತಿಕ್ಕಾಟ ಮತ್ತು ಘರ್ಷಣೆ ಯಾರಿಗೆ ಗೊತ್ತಿಲ್ಲ? ಇವತ್ತು ನಗರದ ಖಾಸಗಿ ಹೋಟೆಲೊಂದರಲ್ಲಿ ನಡೆದ ಸಚಿವ ಭೈರತಿ ಸುರೇಶ್ ಮಗನ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ರಾಜಕೀಯ ಕಹಿ ಮರೆತು, ಜೊತೆಯಾಗಿ ಕೂತು ಹರಟುತ್ತ್ತಾ ಊಟ ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ತನ್ನ ಸಹಿಯ ಫೋರ್ಜರಿಯಾಗಿದ್ದರೂ ಕುಮಾರಸ್ವಾಮಿ ಯಾಕೆ ದೂರು ದಾಖಲಿಸಿಲ್ಲ? ಡಿಕೆ ಶಿವಕುಮಾರ್  

Published on: Aug 28, 2024 02:40 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.