ಸಿಜೆಪಿ ಜೊತೆಗಿನ ಕೇಂದ್ರದ ಸಂಧಾನ ಸಕ್ಸಸ್, ಜಿರಳೆ ಪಾರ್ಟಿ ಹೋರಾಟ ವಾಪಸ್!
ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದ ನೀಟ್ (NEET UG) ಪರೀಕ್ಷಾ ಅಕ್ರಮದ ವಿರುದ್ಧ ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿದ್ದ (Breaking) ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ ಅಂತ್ಯವಾಗಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ದೇಶಾದ್ಯಂತ ಬೃಹತ್ ಪ್ರತಿಭಟನೆ ನಡೆಸಿದ್ದ ಸಿಜೆಪಿ ಜೊತೆ ಕೇಂದ್ರ ಸರ್ಕಾರದ ಪರವಾಗಿ ಸಚಿವ ಜೆಪಿ ನಡ್ಡಾ ಅವರು ನಡೆಸಿದ್ದ ಸಂಧಾನ ಮಾತುಕತೆ ಸಕ್ಸಸ್ ಆಗಿದೆ. ಸರ್ಕಾರದ ಮುಂದೆ 3 ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದ ಸಿಜೆಪಿಯ ಎಲ್ಲ ಬೇಡಿಕೆಗಳೂ ಈಡೇರಿಕೆ ಒಪ್ಪಿಗೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ವಾಪಾಸ್ ಪಡೆಯುವುದಾಗಿ ಸಿಜೆಪಿ ಘೋಷಿಸಿದೆ.
ನವದೆಹಲಿ, (ಜುಲೈ 25): ಕಳೆದ 37 ದಿನಗಳಿಂದ ದೆಹಲಿಯ ಜಂತರ್ ಮಂತರ್ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ಕೊನೆಗೂ ಅಂತ್ಯಗೊಳಿಸಿದೆ. ಕೇಂದ್ರ ಸರ್ಕಾರ ಉಳಿದ 3 ಭರವಸೆಗಳನ್ನು ಈಡೇರಿಸುವ ಭರವಸೆ ನೀಡಿದ ಬೆನ್ನಲ್ಲೇ ಸಿಜೆಪಿ ಪ್ರತಿಭಟನೆ ಕೈಬಿಟ್ಟಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ದೇಶಾದ್ಯಂತ ಬೃಹತ್ ಪ್ರತಿಭಟನೆ ನಡೆಸಿದ್ದ ಸಿಜೆಪಿ ಜೊತೆ ಕೇಂದ್ರ ಸರ್ಕಾರದ ಪರವಾಗಿ ಸಚಿವ ಜೆಪಿ ನಡ್ಡಾ ಅವರು ನಡೆಸಿದ್ದ ಸಂಧಾನ ಮಾತುಕತೆ ಸಕ್ಸಸ್ ಆಗಿದೆ. ಸರ್ಕಾರದ ಮುಂದೆ 3 ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದ ಸಿಜೆಪಿಯ ಎಲ್ಲ ಬೇಡಿಕೆಗಳೂ ಈಡೇರಿಕೆ ಒಪ್ಪಿಗೆ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ವಾಪಾಸ್ ಪಡೆಯುವುದಾಗಿ ಸಿಜೆಪಿ ಘೋಷಿಸಿದೆ.
ಇದನ್ನೂ ಓದಿ: ಎಲ್ಲ ಬೇಡಿಕೆಗೂ ಕೇಂದ್ರ ಸರ್ಕಾರ ಒಪ್ಪಿಗೆ; ಪ್ರತಿಭಟನೆ ಹಿಂಪಡೆದ ಸಿಜೆಪಿ, ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ
Published on: Jul 25, 2026 06:16 PM
Follow Us
