ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದಕ್ಕೆ ಬೆಂಕಿಯ ಪ್ರತಿಕಾರ
ಗ್ರಾಮ ಪಂಚಾಯ್ತಿ ಚುನಾವಣೆ ದ್ವೇಷ.. ಅಡಿಕೆ ತೋಟಕ್ಕೆ ಬೆಂಕಿ

ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದಕ್ಕೆ ಬೆಂಕಿಯ ಪ್ರತಿಕಾರ

ಸಾಧು ಶ್ರೀನಾಥ್​

Updated on: Jan 06, 2021 | 10:54 AM

ಗ್ರಾ.ಪಂ. ಚುನಾವಣೆ ದ್ವೇಷ.. ಅಡಿಕೆ ತೋಟಕ್ಕೆ ಬೆಂಕಿ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದಕ್ಕೆ ಬೆಂಕಿಯ ಪ್ರತಿಕಾರ...., ಅವು ಸಾಲ ಮಾಡಿ, ಬೋರ್ ಕೊರೆಸಿ, ಹಗಲು ರಾತ್ರಿ ಕೃಷಿ ಮಾಡಿ ವರ್ಷವಿಡಿ ದುಡಿದು ಕಷ್ಟಪಟ್ಟು ಬೆಳೆಸಿದ್ದ ನೂರಾರು ಅಡಿಕೆ ಮರಗಳು. ಇನ್ನೇನು ಬೆಳೆ ಕೈಗೆ ಸಿಕ್ಕೆ ಬಿಡ್ತು ಅಂತಾ ಫಸಲಿಗಾಗಿ ಕಾಯ್ತಿದ್ದರು.. ಆದ್ರೆ ವರ್ಷವಿಡಿ ಕಷ್ಟ ಪಟ್ಟು ಬೆಳೆದ ಫಲ ಈಗ ದ್ವೇಷದ ದಳ್ಳೂರಿಗೆ ಸಿಕ್ಕು ಬೆಂಕಿಗಾಹುತಿಯಾಗಿದೆ. ಗ್ರಾಮ ಪಂಚಾಯ್ತಿ ಚುನಾವಣೆ ಎಫೆಕ್ಟ್‌ಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಬೆಳೆ ಕಳೆದುಕೊಂಡ ರೈತನ ಗೋಳು ಈಗ ಅರಣ್ಯರೋಧನವಾಗಿದೆ

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು