ಬಿಜೆಪಿ ನಿಯೋಜಿತ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಕೋಲಾರದಲ್ಲಿ ಅದ್ದೂರಿ ಸ್ವಾಗತ, ಭಾವೀ ಮುಖ್ಯಮಂತ್ರಿ ಅಂತ ಜೈಕಾರ!

ವಿಜಯೇಂದ್ರ ಅವರನ್ನು ಕಂಡೊಡನೆ ಉತ್ಸಾಹಿತರಾಗುವ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯಣ್ಣಂಗೆ ಜೈ, ಮುಂದಿನ ಮುಖ್ಯಮಂತ್ರಿ ವಿಜಯೇಂದ್ರಗೆ ಜಯವಾಗಲಿ ಅಂತ ಘೋಷಣೆಗಳನ್ನು ಕೂಗುತ್ತಾರೆ. ಮುನಿಸ್ವಾಮಿ ಶನಿವಾರದಿಂದ ಹೆಚ್ಚಿನ ಸಮಯವನ್ನು ವಿಜಯೇಂದ್ರರೊಂದಿಗೆ ಕಳೆಯುತ್ತಿರುವುದು ಗಮನಿಸಬೇಕಾದ ಸಂಗತಿ.

ಬಿಜೆಪಿ ನಿಯೋಜಿತ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಕೋಲಾರದಲ್ಲಿ ಅದ್ದೂರಿ ಸ್ವಾಗತ, ಭಾವೀ ಮುಖ್ಯಮಂತ್ರಿ ಅಂತ ಜೈಕಾರ!
|

Updated on: Nov 14, 2023 | 12:59 PM

ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿರುವ ಕುರುಡುಮಲೆ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಲು ನಗರದ ರಾಮಸಂದ್ರ ಗೇಟ್ ಬಳಿ ಬಂದಾಗ ಬಿಜೆಪಿ ನಿಯೋಜಿತ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ (BY Vijayendra) ಕಾಯಕರ್ತರಿಂದ ಅದ್ದೂರಿ ಸ್ವಾಗತ ಸಿಕ್ಕಿತು. ದಾರಿಯುದ್ದಕ್ಕೂ ನೆರೆದಿದ್ದ ಕಾರ್ಯಕರ್ತರು (party workers) ಮತ್ತು ಬೆಂಬಲಿಗರು ಆಳೆತ್ತರದ ಹೂವಿನ ಹಾರ ಹಾಕಿ ಮತ್ತು ಶಾಲುಗಳನ್ನು ಹೊದೆಸಿ ಸನ್ಮಾನಿಸಿದರು. ದೃಶ್ಯಗಳಲ್ಲಿ ಕೋಲಾರ ಸಂಸದ ಎಸ್ ಮುನಿಸ್ವಾಮಿ (S Muniswamy) ಮತ್ತು ವರ್ತೂರು ಪ್ರಕಾಶ್ ರನ್ನು ನೋಡಬಹುದು. ವಿಜಯೇಂದ್ರ ಅವರನ್ನು ಕಂಡೊಡನೆ ಉತ್ಸಾಹಿತರಾಗುವ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯಣ್ಣಂಗೆ ಜೈ, ಮುಂದಿನ ಮುಖ್ಯಮಂತ್ರಿ ವಿಜಯೇಂದ್ರಗೆ ಜಯವಾಗಲಿ ಅಂತ ಘೋಷಣೆಗಳನ್ನು ಕೂಗುತ್ತಾರೆ. ಮುನಿಸ್ವಾಮಿ ಶನಿವಾರದಿಂದ ಹೆಚ್ಚಿನ ಸಮಯವನ್ನು ವಿಜಯೇಂದ್ರರೊಂದಿಗೆ ಕಳೆಯುತ್ತಿರುವುದು ಗಮನಿಸಬೇಕಾದ ಸಂಗತಿ. ಒಂದು ಜವಾಬ್ದಾರಿಯುತ ಮಾಧ್ಯಮವಾಗಿ ನಾವು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹೇಳಿದ್ದನ್ನೇ ವಿಜಯೇಂದ್ರಗೂ ಹೇಳುತ್ತೇವೆ. ಕಾನ್ವಾಯ್ ಹೆಸರಲ್ಲಿ ಹತ್ತಾರು ವಾಹನಗಳನ್ನು ನಿಮ್ಮೊಂದಿಗೆ ಕರೆದೊಯ್ಯಬೇಡಿ, ರಾಜ್ಯವನ್ನು ಭೀಕರ ಬರಗಾಲ ಆವರಿಸಿದೆ, ನೀವು ಪ್ರವಾಸ ಮಾಡಲೇಬೇಕು, ನಿಮಗೆ ಅದು ಅನಿವಾರ್ಯ, ಆದರೆ ನಿಮ್ಮೊಂದಿಗೆ ಸೀಮಿತ ಜನ ಮತ್ತು ವಾಹನಗಳನ್ನು ಕರೆದೊಯ್ಯಿರಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ