ಬಿಜೆಪಿ ನಿಯೋಜಿತ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಕೋಲಾರದಲ್ಲಿ ಅದ್ದೂರಿ ಸ್ವಾಗತ, ಭಾವೀ ಮುಖ್ಯಮಂತ್ರಿ ಅಂತ ಜೈಕಾರ!
ವಿಜಯೇಂದ್ರ ಅವರನ್ನು ಕಂಡೊಡನೆ ಉತ್ಸಾಹಿತರಾಗುವ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯಣ್ಣಂಗೆ ಜೈ, ಮುಂದಿನ ಮುಖ್ಯಮಂತ್ರಿ ವಿಜಯೇಂದ್ರಗೆ ಜಯವಾಗಲಿ ಅಂತ ಘೋಷಣೆಗಳನ್ನು ಕೂಗುತ್ತಾರೆ. ಮುನಿಸ್ವಾಮಿ ಶನಿವಾರದಿಂದ ಹೆಚ್ಚಿನ ಸಮಯವನ್ನು ವಿಜಯೇಂದ್ರರೊಂದಿಗೆ ಕಳೆಯುತ್ತಿರುವುದು ಗಮನಿಸಬೇಕಾದ ಸಂಗತಿ.
ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿರುವ ಕುರುಡುಮಲೆ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಲು ನಗರದ ರಾಮಸಂದ್ರ ಗೇಟ್ ಬಳಿ ಬಂದಾಗ ಬಿಜೆಪಿ ನಿಯೋಜಿತ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ (BY Vijayendra) ಕಾಯಕರ್ತರಿಂದ ಅದ್ದೂರಿ ಸ್ವಾಗತ ಸಿಕ್ಕಿತು. ದಾರಿಯುದ್ದಕ್ಕೂ ನೆರೆದಿದ್ದ ಕಾರ್ಯಕರ್ತರು (party workers) ಮತ್ತು ಬೆಂಬಲಿಗರು ಆಳೆತ್ತರದ ಹೂವಿನ ಹಾರ ಹಾಕಿ ಮತ್ತು ಶಾಲುಗಳನ್ನು ಹೊದೆಸಿ ಸನ್ಮಾನಿಸಿದರು. ದೃಶ್ಯಗಳಲ್ಲಿ ಕೋಲಾರ ಸಂಸದ ಎಸ್ ಮುನಿಸ್ವಾಮಿ (S Muniswamy) ಮತ್ತು ವರ್ತೂರು ಪ್ರಕಾಶ್ ರನ್ನು ನೋಡಬಹುದು. ವಿಜಯೇಂದ್ರ ಅವರನ್ನು ಕಂಡೊಡನೆ ಉತ್ಸಾಹಿತರಾಗುವ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ವಿಜಯಣ್ಣಂಗೆ ಜೈ, ಮುಂದಿನ ಮುಖ್ಯಮಂತ್ರಿ ವಿಜಯೇಂದ್ರಗೆ ಜಯವಾಗಲಿ ಅಂತ ಘೋಷಣೆಗಳನ್ನು ಕೂಗುತ್ತಾರೆ. ಮುನಿಸ್ವಾಮಿ ಶನಿವಾರದಿಂದ ಹೆಚ್ಚಿನ ಸಮಯವನ್ನು ವಿಜಯೇಂದ್ರರೊಂದಿಗೆ ಕಳೆಯುತ್ತಿರುವುದು ಗಮನಿಸಬೇಕಾದ ಸಂಗತಿ. ಒಂದು ಜವಾಬ್ದಾರಿಯುತ ಮಾಧ್ಯಮವಾಗಿ ನಾವು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹೇಳಿದ್ದನ್ನೇ ವಿಜಯೇಂದ್ರಗೂ ಹೇಳುತ್ತೇವೆ. ಕಾನ್ವಾಯ್ ಹೆಸರಲ್ಲಿ ಹತ್ತಾರು ವಾಹನಗಳನ್ನು ನಿಮ್ಮೊಂದಿಗೆ ಕರೆದೊಯ್ಯಬೇಡಿ, ರಾಜ್ಯವನ್ನು ಭೀಕರ ಬರಗಾಲ ಆವರಿಸಿದೆ, ನೀವು ಪ್ರವಾಸ ಮಾಡಲೇಬೇಕು, ನಿಮಗೆ ಅದು ಅನಿವಾರ್ಯ, ಆದರೆ ನಿಮ್ಮೊಂದಿಗೆ ಸೀಮಿತ ಜನ ಮತ್ತು ವಾಹನಗಳನ್ನು ಕರೆದೊಯ್ಯಿರಿ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
