ಜನಪದ ಹಾಡಿನ ಮೂಲಕ ಸಚಿವ ಡಾ ಸಿಎನ್ ಅಶ್ವತ್ಥನಾರಾಯಣರನ್ನ ಹರಿಸಿದ ಅಜ್ಜಿ: ವಿಡಿಯೋ ನೋಡಿ

Updated on: Apr 10, 2023 | 9:52 PM

ಮಲ್ಲೇಶ್ವರ ಕ್ಷೇತ್ರದಲ್ಲಿ ಪಾದಯಾತ್ರೆ ಮೂಲಕ ಮನೆ ಮನೆಗೆ ಮತ ಯಾಚನೆಗೆ ಬಂದಾಗ ಹಾಲಿ ಶಾಸಕ ಮತ್ತು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣಗೆ ಅಜ್ಜಿ ಓರ್ವವು ಆಶೀರ್ವದಿಸಿದ್ದು ಹೀಗೆ.

ಬೆಂಗಳೂರು: ರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಸಮೀಪಿಸುತ್ತಿದ್ದಂತೆ ಕಾವು ಹೆಚ್ಚುತ್ತಿದೆ. ಪ್ರತಿಯೊಂದು ಪಕ್ಷದ ಅಭ್ಯರ್ಥಿಗಳು ತಮ್ಮ ತಮ್ಮ ಮತದಾರರನ್ನು ಸೆಳೆಯಲು ಕಸರತ್ತು ನಡೆಸಿದ್ದಾರೆ. ಮಲ್ಲೇಶ್ವರ ಕ್ಷೇತ್ರದಲ್ಲಿ ಹಾಲಿ ಶಾಸಕ ಮತ್ತು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಗಾಂಧಿಗ್ರಾಮ ಪ್ರದೇಶದಲ್ಲಿ ಸೋಮವಾರ ಪಾದಯಾತ್ರೆ ಮೂಲಕ ಮತ ಯಾಚನೆ ಮಾಡಿದರು. ಈ ಮೂಲಕ ಕ್ಷೇತ್ರದಲ್ಲಿ ಚುನಾವಣೆ ಕಾವು ತೀವ್ರಗೊಂಡಿದೆ. ಇನ್ನು ಇದೇ ವೇಳೆ ಅಜ್ಜಿಯೊಬ್ಬರು ಜಾನಪದ ಹಾಡು ಹೇಳುವ ಮೂಲಕ ಆಶೀರ್ವಾದ ಮಾಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Published on: Apr 10, 2023 09:50 PM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More